Connect with us

Dvgsuddi Kannada | online news portal | Kannada news online

ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ; ಗೋಹತ್ಯೆ ನಿಷೇಧ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ-ಸಿಎಂ ಸಿದ್ದರಾಮಯ್ಯ

ದಾವಣಗೆರೆ

ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ; ಗೋಹತ್ಯೆ ನಿಷೇಧ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ-ಸಿಎಂ ಸಿದ್ದರಾಮಯ್ಯ

ದಾವಣಗೆರೆ; ಹೊಸ ಸರ್ಕಾರದಿಂದ ಹೊಸದಾಗಿ ರಾಜ್ಯ ಬಜೆಟ್‌ ಮಂಡನೆ ಮಾಡಬೇಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ ಮಾತನಾಡಿದ್ದು, ಜುಲೈ 3ರಿಂದ ಬಜೆಟ್‌ ಅಧಿವೇಶನ ಕರೆಯಲಾಗುತ್ತದೆ. ಜುಲೈ 7ರಂದು ಬಜೆಟ್‌ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆದ ಬಳಿಕ ಮೊದಲ ಬಾರಿ ದಾವಣಗೆರೆ ಜಿಲ್ಲೆಗೆ ಬಂದಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಹಿಂದೆ ನಾವು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದಿದ್ದೇವು. ಆದರೆ, ಬಿಜೆಪಿ ಪುನಃ ಜಾರಿಗೆ ತಂದಿದೆ. ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಇನ್ನು ಗ್ಯಾರೆಂಟಿಗಳ ಜಾರಿ ಬಗ್ಗೆ ಮಾತನಾಡಿ, ಆದಷ್ಟು ಬೇಗ ಗ್ಯಾರೆಂಟಿಗಳು ಜನರಿಗೆ ತಲುಪುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ಈ ಬಗ್ಗೆ ಸೂಚನೆ ಕೊಟ್ಟಿದ್ದೇನೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top