Connect with us

Dvgsuddi Kannada | online news portal | Kannada news online

ಕೊರೊನಾ ಲಸಿಕೆ ಪಡೆದ ತರಳಬಾಳು ಶ್ರೀ

ಪ್ರಮುಖ ಸುದ್ದಿ

ಕೊರೊನಾ ಲಸಿಕೆ ಪಡೆದ ತರಳಬಾಳು ಶ್ರೀ

ದಾವಣಗೆರೆ: ಬೆಂಗಳೂರಿನ ವಿಕ್ಟೋರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಇಂದು ಕೋವ್ಯಾಕ್ಸಿನ್ ಲಸಿಕೆ ಪಡೆದರು.

ವಿಶ್ವದಲ್ಲೆಡೆ ತಲ್ಲಣ ಸೃಷ್ಟಿಸಿದ ಮಹಾಮಾರಿ ಕೊರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗವಾಗಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಶ್ರೀಗಳು ಸಂದೇಶ ನೀಡಿದರು.

ಲಸಿಕೆ ಪಡೆಯಲು ಯಾರೂ ಭಯಪಡಬೇಕಾಗಿಲ್ಲ. ಸೂಜಿ ಚುಚ್ಚು ವುದು ಗೊತ್ತೇ ಆಗುವುದಿಲ್ಲ. ಇರುವೆ ಕಚ್ಚಿದಷ್ಟೂ ನೋವು ಆಗುವುದಿಲ್ಲ ಎಂದು ತಮ್ಮ ಸ್ವಾನುಭವ ಹೇಳಿದ ಶ್ರೀಗಳು, ಭಕ್ತಾದಿಗಳು ಮತ್ತು ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದರು.

“ಮನೆ ಗೆದ್ದು ಮಾರು ಗೆಲ್ಲು” ಎನ್ನುವಂತೆ ನಮ್ಮ ದೇಶದ ಎಲ್ಲ ಪ್ರಜೆಗಳಿಗೆ ಲಸಿಕೆಯನ್ನು ಕೊಡುವುದಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆಯನ್ನು ಪೂರೈಕೆ ಮಾಡುತ್ತಿರುವ ಭಾರತದ ಪ್ರಧಾನಿ ಮೋದಿಯವರ ಮಾನವೀಯ ದೃಷ್ಟಿಯನ್ನು ಶ್ಲಾಘಿಸಿದರು.

ಇದು ಸಹಸ್ರಾರು ವರ್ಷಗಳ ಹಿಂದೆ “ವಸುಧೈವ ಕುಟುಂಬಕಮ್” ಎಂದು ಬೋಧಿಸಿದ ಉಪನಿಷತ್ತಿನ ಸೂಕ್ತಿಗೆ ಮತ್ತು “ಸಕಲ ಜೀವಾತ್ಮರಿಗೆ ಲೇಸನೇ ಬಯಸುವ ಕೂಡಲಸಂಗನ ಶರಣರೇ ಕುಲಜರು” ಎನ್ನುವ ಬಸವಣ್ಣನವರ ಆಶಯಕ್ಕೆ ಪೂರಕವಾಗಿದೆ. ಮನುಜ ಕುಲವನ್ನು ಸಂರಕ್ಷಿಸಿದ ಮಹಾನ್ ರಾಷ್ಟ್ರ ಭಾರತವಾಗಲಿದೆ ಎಂದು ಬಣ್ಣಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top