ದಾವಣಗೆರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಸಿರಿಗೆರೆಯ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಶಿವಶಂಕರಪ್ಪ ಹಾಗೂ ಅವರ ಕುಟುಂಬದ ಸದಸ್ಯರಾದ ತೋಟಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರ ಎಸ್ ಎಸ್ ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ನಿವೃತ್ತ ಪೊಲೀಸ್ ಡಿಜಿಪಿ ಶಂಕರ್ ಬಿದರಿ ಉಪಸಿತರಿದ್ದರು.



