ಕಾರವಾರ: ರಾಜ್ಯಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿಗೆ ಇನ್ನೊಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಬಗ್ಗೆ ಉತ್ತರ ಕನ್ನಡದಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಶಿಕ್ಷಕರ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುವುದು. 15 ಸಾವಿದಲ್ಲಿ 5 ಸಾವಿರ ಕಲ್ಯಾಣ ಕರ್ನಾಟಕ, 10 ಸಾವಿರ ಉಳಿದ ಭಾಗದಲ್ಲಿ ತುಂಬಿಕೊಳ್ಳಲಾಗುವುದು. ಇನ್ನು ಈ ಬಾರಿ ಪಿಯುಸಿ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮತ್ತೆ ಪ್ರತ್ಯೇಕ ಪರೀಕ್ಷೆ ಕೊಡುವುದಿಲ್ಲ. ಮುಂದಿನ ಪರೀಕ್ಷೆಯಲ್ಲಿಯೇ ಪರೀಕ್ಷೆ ತೆಗೆದುಕೊಳ್ಳಬೇಕು ಎಂದರು.



