ಮಂದಿನ ಐದು ದಿನ ರಾಜ್ಯದಲ್ಲಿ ಭಾರಿ ಚಳಿ ವಾತಾವರಣ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ದುರ್ಬಲಗೊಂಡಿದೆ. ಮಳೆಗಾಲ ಮುಗಿದು ಚಳಿಗಾಲ ಶುರುವಾಗಿದ್ದರೂ ರಾಜ್ಯ ವ್ಯಾಪಿ ಅಷ್ಟೊಂದು ಚಳಿ ಆವರಿಸಿರಲಿಲ್ಲ. ಇದೀಗ ಮುಂದಿನ ಐದು ದಿನ ರಾಜ್ಯದಲ್ಲಿ ಭಾರಿ ಶೀತ ಗಾಳಿ ಬೀಸಲಿದ್ದು , ರಾಜ್ಯದ ಜನ ಎಚ್ಚರಿಕೆಯಿಂದ ಇರಿವಂತೆ ಸೂಚನೆ ನೀಡಲಾಗಿದೆ.

ಪ್ರತಿ ರೈತರಿಂದ ಮೆಕ್ಕೆಜೋಳ ಖರೀದಿ‌‌ ಮಿತಿ 20 ಕ್ವಿಂಟಲ್ ನಿಂದ 50 ಕ್ವಿಂಟಲ್ ಗೆ ಹೆಚ್ಚಳ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದ ಪ್ರಮಾಣ ಕುಸಿಯಲಿದ್ದು, ಮೈಕೊರೆವ ಚಳಿ ವಾತಾವರಣ ಸೃಷ್ಟಿಯಾಗಲಿದೆ. ಮುಂದಿನ ಐದು ದಿನ ರಾಜ್ಯದಲ್ಲಿ ಶೀತ ಗಾಳಿ‌ಗೆಚ್ಚು ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ದಾವಣಗೆರೆ: ಅಡಿಕೆ ದರ ಮತ್ತಷ್ಟು ಕುಸಿತ; ದಿನದಿಂದ‌‌ ದಿನಕ್ಕೆ ಇಳಿಕೆ ಹಾದಿ ಹಿಡಿದ ರಾಶಿ ಅಡಿಕೆ | ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ಪೂರ್ವ ದಿಕ್ಕಿನ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ, ಒಳನಾಡು, ಮಲೆನಾಡು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುತ್ತದೆ. ಆದರೆ ಬೆಳಗ್ಗೆ, ರಾತ್ರಿ ದಟ್ಟ ಮಂಜು, ವಿಪರೀತ ಚಳಿ ಆವರಿಸಲಿದೆ. ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಆಗಲಿದೆ. ಉತ್ತರ ಕರ್ನಾಟಕದ ಬೀದರ್ ಜಿಲ್ಲೆಗೆ ಹವಾಮಾನ ಇಲಾಖೆ ಐದು ದಿನಗಳ ಶೀತ ಅಲೆ ಅಲರ್ಟ್ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಮುಂದಿನ ಐದ ದಿನ ವರೆಗೆ ಒಣಹವೆ ಮುಂದುವರಿಯುತ್ತದೆ. ಹಗಲು ಹೊತ್ತು ಗರಿಷ್ಠ ಪ್ರಮಾಣದ ತಾಪಮಾನ ದಾಖಲಾಗಿದೆ. ಉರಿ ಬಿಸಿಲು ಕಂಡು ಬರಲಿದ್ದು, ರಾತ್ರಿ, ಬೆಳಗ್ಗೆ ಚಳಿ ಆವರಿಸಲಿದೆ. ತಾಪಮಾನ ಇಳಿಕೆ ಪ್ರವೃತ್ತಿ ಹೊರತಾಗಿ ವಾತಾವರಣದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.ಬೀದರ್‌ ಸೇರಿ ಉತ್ತರ ಕರ್ನಾಟಕದಲ್ಲಿನ ಶೀತ ಅಲೆ ರಾಜ್ಯವ್ಯಾಪಿ ವಿಸ್ತರಣೆ ಆಗುವ ನಿರೀಕ್ಷೆ ಇದೆ.

ದಾವಣಗೆರೆ: ಏಷ್ಯಾದ ಎರಡನೇ ದೊಡ್ಡ ಕೆರೆ ಸೂಳೆಕೆರೆಗೆ 40 ಲಕ್ಷ ಮೀನಿನ ಮರಿ ಬಿಡಲು ಕ್ರಮ: ಶಾಸಕ

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ದಟ್ಟ ಮಂಜು ಆವರಿಸಲಿದ್ದು, ನಿಧಾನವಾಗಿ ಚಳಿ ಹೆಚ್ಚಾಗಲಿದೆ. ಈವರೆಗೆ ಆಗಾಗ ಕಾಣುತ್ತಿದ್ದ ಮಬ್ಬು ವಾತಾವರಣ ಮರೆಯಾಗಿ ಸ್ಪಷ್ಟ ನೀಲಿ ಆಕಾಶ ಕಂಡು ಬರಲಿದೆ. ಈ ವೇಳೆ ಒಣಹವೆ ಮುಂದುವರಿಯುತ್ತದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *