ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ರಥೋತ್ಸವ ರದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾ.22 ಏ.05 ವರೆಗೆ ನಡೆಸಲು ಆಯೋಜಿಸಲಾಗಿತ್ತು. ಆದರೆ, ಕೊರೊನಾ ಸೋಂಕಿನ ಕಾರಣ , ಮುಂಜಾಗ್ರತಾ ಕ್ರಮವಾಗಿ ರದ್ದು ಪಡಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ ಕೋವಿಡ್-19 ಹರಡದಂತೆ ತಡೆಯುವ ಹಿನ್ನೆಲೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ನಿಷೇಧಿಸಲಾಗಿದೆ.

ಜಾತ್ರಾ ಮಹೋತ್ಸವಕ್ಕೆ ಹೊರಗಡೆಯಿಂದ ಬರುವ ಸಾರ್ವಜನಿಕರು ಹಾಗೂ ಭಕ್ತಾಧಿಗಳು ಭಾಗವಹಿಸುವುದನ್ನು ನಿಷೇಧಿಸಲಾಗಿದೆ ಎಂಬುದಾಗಿ ತಿಳಿಸಿದೆ. ಭಕ್ತಾಧಿಗಳಿಗೆ ಯಾವುದೇ ಅನ್ನ ದಾಸೋಹ(ಪರವು) ಇರುವುದಿಲ್ಲ. ಅಂಗಡಿ ಮುಂಗಟ್ಟುಗಳು, ಜಾತ್ರಾ ಸಾಮಗ್ರಿಗಳು, ವಾಣಿಜ್ಯ ಮಳಿಗೆಗಳನ್ನು ಹಾಕಲು ಅನುಮತಿ ಇರುವುದಿಲ್ಲ. ನಾಯಕನಹಟ್ಟಿಯ ಸುತ್ತಮುತ್ತಲಿನ ಯಾವುದೇ ಸ್ಥಳಗಳಲ್ಲಿ ಟೆಂಟ್ ಇತ್ಯಾದಿ ತಾತ್ಕಾಲಿಕ ವಸತಿಗಳನ್ನು ನಿರ್ಮಿಸಿಕೊಳ್ಳಲು ಅವಕಾಶವಿರುವುದಿಲ್ಲ.

ನಾಯಕನಹಟ್ಟಿ ಸುತ್ತಮುತ್ತಲಿನ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಮದ್ಯಪಾನ, ಮಾರಾಟ, ಸರಬರಾಜು ಹಾಗೂ ಪ್ರಾಣಿ ಬಲಿಯನ್ನು ನಿಷೇಧಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *