ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ , ಪಾರ್ಸಿ‌ ಸಮುದಾಯದ ಅಭ್ಯರ್ಥಿಗಳಿಗೆ CISF, BSF, RPF, ಪೊಲೀಸ್, ಅಬಕಾರಿ ಇಲಾಖೆಯ ಪೂರ್ವ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯವದರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಅಲ್ಪಸಂಖ್ಯಾತರ ಕೌಶಲ್ಯಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ರಕ್ಷಣಾ ಏಕರೂಪದ ಸೇವೆಗಳಿಗೆ ವಸತಿ ಸಹಿತವಾಗಿ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ತರಬೇತಿ ಹಮ್ಮಿಕೊಳ್ಳಲಾಗಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ , ಪಾರ್ಸಿ‌ ಸಮುದಾಯಕ್ಕೆ ಭಾರತೀಯ ಸೇನೆ, ವಾಯುಪಡೆ, ನೌಕಾಪಡೆ, CISF, BSF, RPF, ಪೊಲೀಸ್, ಅಬಕಾರಿ ಹುದ್ದೆಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 05/01/2024 ಕೊನೆಯ ದಿನವಾಗಿದೆ. ಈ ಜಿಲ್ಲೆಗಳ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಕ್ಷಣಾ/ಏಕರೂಪದ ಸೇವೆಗಳಿಗೆ (ಭಾರತೀಯ ಸೇನೆ, ವಾಯುಪಡೆ, ನೌಕಾಪಡೆ, CISF, BSF, RPF, ಪೊಲೀಸ್, ಅಬಕಾರಿ ಇತ್ಯಾದಿ) ಸೇರಲು ಇಚ್ಛಿಸುವ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ತರಬೇತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆಗಳು:ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಾಗಿರಬೇಕು. ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಾಗಿರಬೇಕು. ನಿಗದಿತ ವಯೋಮಾನ ಹೊಂದಿರಬೇಕು.ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಮೀರಿರಬಾರದು. ಕುಟುಂಬದ ವಾರ್ಷಿಕ ಆದಾಯವು 8.00 ಲಕ್ಷಗಳು.ತರಬೇತಿ ಕಾಲಾವಧಿಯು 60 ದಿನಗಳಾಗಿರುತ್ತದೆ. ತರಬೇತಿಯನ್ನು ಊಟ, ವಸತಿ ಸೌಲಭ್ಯದೊಂದಿಗೆ ನೀಡಲಾಗುವುದು. ಅಭ್ಯರ್ಥಿಗೆ ಯಾವುದೇ ತರಹದ ಸೈಫಂಡ್ ನೀಡಲಾಗುವುದಿಲ್ಲ. ನಿಗದಿತ ದೈಹಿಕ ದಾರ್ಡ್ಯತೆ ಹೊಂದಿರಬೇಕು. ಕೊನೆಯ ದಿನಾಂಕ: ಅನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 05/01/2024. ಅರ್ಜಿದಾರರು https://dom.karnataka.gov.in ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *