Connect with us

Dvgsuddi Kannada | online news portal | Kannada news online

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪ್ರಮುಖ ಸುದ್ದಿ

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಹರಿಹರ: ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮೂರನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.  ನಂತರ ಸರ್ವಧರ್ಮೀಯರ ಸಾಮೂಹಿಕ ವಿವಾಹ ಮಹೋತ್ಸವವು ಜರುಗಿತು. ಬಳಿಕ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಲಾಯಿತು.

ಹರಿಹರದ ಶಾಸಕ ಎಸ್ ರಾಮಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ  ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ದಲ್ಲಿ ಚಲನಚಿತ್ರ ನಟಿ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ವಿಶ್ರಾಂತ ಕುಲಪತಿ ಡಾ ಮಲ್ಲಿಕಾ ಎಸ್ ಘಂಟಿ ,ನಾಗಾಂಬಿಕಾ ದೇವಿ, ಮಾಲಿನಿ ಕೃಷ್ಣಮೂರ್ತಿ, ಡಾ. ಮಂಜುಳಾ,  ಪ್ರಿಯಾಂಕಾ ಎಸ್ ಜಾರಕಿಹೊಳಿ ಇದ್ದರು.ಎಲ್ಲಾ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ವಾಲ್ಮೀಕಿ  ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ವಹಿಸಿದ್ದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪುಣ್ಯಕೋಟಿ ಮಠದ ಜಗದೀಶ್ವರ  ಮಹಾಸ್ವಾಮಿಗಳು,  ಶಾಸಕ ಎಸ್ ವಿ ರಾಮಚಂದ್ರಪ್ಪ, ಜಗಳೂರು ಮಾಜಿ ಶಾಸಕ ಎಚ್ ಪಿ ರಾಜೇಶ್, ಮಾಜಿ ಸಭಾಪತಿಗಳಾದ ಕೆ ಬಿ ಕೋಳಿವಾಡ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಚುನಾಯಿತ ಪ್ರತಿನಿಧಿಗಳು ಸಮಾಜದ ಮುಖಂಡರುಗಳು ಭಾಗವಹಿಸಿದ್ದರು. ನಂತರ ಮಧ್ಯಾಹ್ನ 3ಗಂಟೆಯಿಂದ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಮಾವೇಶ ಮತ್ತು  ಇತರೆ ಕಾರ್ಯಕ್ರಮಗಳು ಜರುಗಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});