ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸದ್ಯಸರು ಮೊಬೈಲ್ ಬಳಕೆ ಮಾಡದಂತೆ ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.
ನಾಳೆಯಿಂದ ಬಜೆಟ್ ಅಧೀವೇಶನ ಶುರುವಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಸದ್ಯಸರು ಮೊಬೈಲ್ ತರದಂತೆ ಆದೇಶ ನೀಡಲಾಗಿದ್ದು, ಈ ಬಗ್ಗೆ ಸಭಾನಾಯಕರು, ಸಚೇತಕರು ಹಾಗು ಸದ್ಯಸರ ಜೊತೆಗೆ ಚರ್ಚೆ ನಡೆಸಿ ಸದನ ಘನತೆಗೆ ಕಪ್ಪು ಚುಕ್ಕೆ ಬಾರದು ಎನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.



