Connect with us

Dvgsuddi Kannada | online news portal | Kannada news online

ಪ್ರತಿ ಗ್ರಾಮ ಪಂಚಾಯತಿಯ‌ಲ್ಲಿ ಎರಡು ವಿವೇಕಾನಂದ ಸ್ವಸಹಾಯ ಗುಂಪು ರಚನೆ; 5 ಲಕ್ಷದ ವರೆಗೆ ಸಾಲ ಸೌಲಭ್ಯ; 1 ಲಕ್ಷ ಸಬ್ಸಿಡಿ

ಪ್ರಮುಖ ಸುದ್ದಿ

ಪ್ರತಿ ಗ್ರಾಮ ಪಂಚಾಯತಿಯ‌ಲ್ಲಿ ಎರಡು ವಿವೇಕಾನಂದ ಸ್ವಸಹಾಯ ಗುಂಪು ರಚನೆ; 5 ಲಕ್ಷದ ವರೆಗೆ ಸಾಲ ಸೌಲಭ್ಯ; 1 ಲಕ್ಷ ಸಬ್ಸಿಡಿ

ಬೆಂಗಳೂರು; ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಸ್ವ-ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ರಾಜ್ಯ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಆದೇಶ ಹೊರಡಿಸಿದೆ. ಇದರಿಂದ 5 ಲಕ್ಷ ವರೆಗೆ ಸಾಲಸೌಲಭ್ಯ ಒದಗಿಸಲಾಗುತ್ತದೆ.

ರಾಜ್ಯದ ಪ್ರತಿ ಗ್ರಾಮಪಂಚಾಯತ್ ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಆದೇಶಿಸಿದ್ದು, ಪ್ರತಿ ಗ್ರಾಮಪಂಚಾಯಿತಿಗೆ ಎರಡರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದರು.

ಪ್ರತಿ ಗುಂಪಿಗೆ 10 ಸಾವಿರ ರೂ. ನಿಧಿ, 1 ಲಕ್ಷ ರೂ. ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲಸೌಲಭ್ಯ ಒದಗಿಸಲಾಗುತ್ತದೆ. ಸ್ಥಳೀಯ ಬೇಡಿಕೆಗಳನ್ನು ಆಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top