ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಸಿಎಂ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಈಗಿರುವ ಮಾರ್ಗಸೂಚಿಗಳೇ ಮುಂದುವರಿಯಲಿವೆ ಎಂದು ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಿದೆ. 300 ಮೆಟ್ರಿಕ್ ಟನ್ಗಳಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ.
ನಿನ್ನೆ ಸಂಜೆಯ ಸಭೆಯಲ್ಲಿ ಕೇಂದ್ರ ಸರ್ಕಾರ, ರೆಮ್ಡೆಸಿವಿರ್ ಇಂಜೆಕ್ಷನ್ಗಳು ರಾಜ್ಯಕ್ಕೆ ಹೆಚ್ಚು ಒದಗಿಸಲು ಕೇಂದ್ರ ಸರ್ಕಾರ ಸಹಕಾರ ನೀಡಲಿದೆ. 50 ಸಾವಿರದಿಂದ 1,22,000 ರೆಮ್ಡೆಸಿವಿರ್ ಇಂಜೆಕ್ಷನ್ಗಳು ರಾಜ್ಯಕ್ಕೆ ಸಿಗಲಿದೆ. ಮೇ1ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ ಎಂದು ಮಾಹಿತಿ ನೀಡಿದರು.



