ಬೆಂಗಳೂರು: ರೈತರು ಹಾಗೂ ಸಹಕಾರ ಸಂಘಗಳ ಸದಸ್ಯರಿಗೆ ಸರ್ಕಾರ ಯಶಸ್ವಿನಿ’ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿದೆ. ಯಶಸ್ವಿನಿ ಆರೋಗ್ಯ ಯೋಜನೆಯಿಂದ ನೆಟ್ ವರ್ಕ್ ಆಸ್ಪತ್ರಗಳಲ್ಲಿ 5 ಲಕ್ಷದ ವರೆಗೆ ಚಿಕಿತ್ಸೆ ವೆಚ್ಚ ಸರ್ಕಾರವೇ ಭರಿಸಲಿದೆ. ಈ ಯೋಜನೆಯಿಂದ ಸಾಕಷ್ಟು ಪ್ರಯೋಜನಗಳಿರುವುದರಿಂದ ಸಹಜವಾಗಿಯೇ ನೋಂದಣಿಗೆ ಉತ್ಸಾಹ ತೋರಿಸಲಾಗುತ್ತಿದೆ.
2022-23ನೇ ಸಾಲಿನಿಂದ ಜಾರಿಗೊಳ್ಳುತ್ತಿರುವ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಮೊದಲಿಗೆ 2023ರ ಜನವರಿ 31 ಅಂತಿಮ ದಿನವೆಂದು ಹೇಳಲಾಗಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಿಸಲಾಗಿದೆ.ರೈತರು ಮತ್ತು ಸಹಕಾರ ಸಂಸ್ಥೆಗಳು ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಯಶಸ್ವಿನಿ ಯೋಜನೆ ನೋಂದಣಿಗೆ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28 ಎಂದು ನಿಗದಿಪಡಿಸಲಾಗಿದೆ.



