Connect with us

Dvgsuddi Kannada | online news portal | Kannada news online

ಯಶಸ್ವಿನಿ ಯೋಜನೆ ನವೆಂಬರ್ 1ರಿಂದ ಪುನರಾರಂಭ: ಸಿಎಂ

ಪ್ರಮುಖ ಸುದ್ದಿ

ಯಶಸ್ವಿನಿ ಯೋಜನೆ ನವೆಂಬರ್ 1ರಿಂದ ಪುನರಾರಂಭ: ಸಿಎಂ

ಬೆಂಗಳೂರು: ರಾಜ್ಯದ ರೈತರು, ಬಡ ವರ್ಗದವರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನ ನವೆಂಬರ್ 1 ರಂದು ಪುನರಾರಂಭವಾಗಲಿದೆ.

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ ಐಸಿಯು ಉಪ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಕಲ್ಪಿಸಲು ಯಶಸ್ವಿನಿ ಯೋಜನೆಯಿಂದ ಅನುಕೂಲವಾಗಿತ್ತು. ಹೀಗಾಗಿ ರೈತರ ಹಿತ ದೃಷ್ಟಿಯಿಂದ ನವೆಂಬರ್ ಒಂದರಂದು ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು. ಶ್ರವಣದೋಷ ಹೊಂದಿದ ಬಡ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಉಚಿತವಾಗಿ ಪೂರೈಸುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗಿದೆ. ಗ್ರಾಮೀಣ, ತಾಲ್ಲೂಕು, ವಲಯ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುವುದು ಎಂದು ಹೇಳಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top