ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಮತ್ತಷ್ಟು ಆಸ್ಪತ್ರೆ ಸೇರ್ಪಡೆ; 200 ಚಿಕಿತ್ಸಾ ವೆಚ್ಚ‌ಗಳ ದರ ಪರಿಷ್ಕರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ. ಯೋಜನೆ ವ್ಯಾಪ್ತಿಗೆ ಮತ್ತಷ್ಟು ಆಸ್ಪತ್ರೆಗಳನ್ನು ಸೇರಿಸಲಾಗಿದೆ. ಕಾರ್ಡ್ ಹೊಂದಿದರು 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು.

2003ರಲ್ಲಿ ಈ ಯೋಜನೆ ಆರಂಭಿಸಲಾಯಿತು. ಕಾರಣಾಂತರದಿಂದ 2018ರಲ್ಲಿ ಯೋಜನೆ ಸ್ಥಗಿತಗೊಳ್ಳಿಸಲಾಗಿದೆ. ಬಳಿಕ ರಾಜ್ಯದ ಸರ್ಕಾರವು 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿತ್ತು. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾರ್ಚ್‌ 31ರ ವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ, 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು 300% ವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370 ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.

ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್‌ವರ್ಕ್‌ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.

ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *