Connect with us

Dvgsuddi Kannada | online news portal | Kannada news online

ಯಶಸ್ವಿನಿ ಯೋಜನೆ ನೋಂದಣಿ ಅವಧಿಯನ್ನು ಮಾ. 31ರವರೆಗೆ ವಿಸ್ತರಣೆ

ಪ್ರಮುಖ ಸುದ್ದಿ

ಯಶಸ್ವಿನಿ ಯೋಜನೆ ನೋಂದಣಿ ಅವಧಿಯನ್ನು ಮಾ. 31ರವರೆಗೆ ವಿಸ್ತರಣೆ

ದಾವಣಗೆರೆ: ಸಹಕಾರಿ ಸಂಘದ ಸದಸ್ಯರು, ರೈತರಿಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು ಪರಿಗಣಿಸಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.ಸಹಕಾರಿ ಸಂಘದ ಸದಸ್ಯರು, ರೈತರಿಗೆ ಸರ್ಕಾರವು ಯಶಸ್ವಿನಿ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸಲು ನಿರ್ಧರಿಸಿದ್ದು, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.

ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕೆ ಯೋಜನೆ ಜಾರಿಗೊಳಿಸಿದ್ದು, ಡಿಸೆಂಬರ್ 31 ವರೆಗೆ ಇದ್ದ ಅವಧಿಯನ್ನು ಈ ಹಿಂದೆ ಎರಡು ಬಾರಿ ವಿಸ್ತರಿಸಲಾಗಿತ್ತು. ಫೆಬ್ರವರಿ 28 ನೋಂದಣಿಗೆ ಕೊನೆಯ ದಿನವಾಗಿದ್ದು, ಇದುವರೆಗೆ 34.52 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿಯಲ್ಲಿ ಗುರಿ ಮೀರಿ ಸಾಧನೆ ಮಾಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top