ಜ.20 ರವರಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ತಿಂಗಳಿಗೆ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳ ವರೆಗೆ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು). ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು.

ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.sevasindhugs.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *