Connect with us

Dvgsuddi Kannada | online news portal | Kannada news online

ವಿದ್ಯುತ್ ಕಳ್ಳತನ ಆರೋಪ; 68,526 ರೂ. ದಂಡ ಪಾವತಿಸಿದ ಮಾಜಿ ಸಿಎಂ ಕುಮಾರಸ್ವಾಮಿ; ಡಿಸಿಎಂ ಪಾಲುದಾರಿಕೆಯ ಲುಲು ಮಾಲ್​​​ ಆರಂಭಿಕ 6 ತಿಂಗಳು ಕರೆಂಟ್ ಬಿಲ್​ ಕಟ್ಟಿಲ್ಲ…!‌ಇದಕ್ಕೆ ದಂಡ ಹಾಕಲ್ವಾ..?

n55726585617002086137385375026e5cfc51547d9bc1ff4aae99e891b12e37bf4cbcc1d8bd91646ef067ea

ಪ್ರಮುಖ ಸುದ್ದಿ

ವಿದ್ಯುತ್ ಕಳ್ಳತನ ಆರೋಪ; 68,526 ರೂ. ದಂಡ ಪಾವತಿಸಿದ ಮಾಜಿ ಸಿಎಂ ಕುಮಾರಸ್ವಾಮಿ; ಡಿಸಿಎಂ ಪಾಲುದಾರಿಕೆಯ ಲುಲು ಮಾಲ್​​​ ಆರಂಭಿಕ 6 ತಿಂಗಳು ಕರೆಂಟ್ ಬಿಲ್​ ಕಟ್ಟಿಲ್ಲ…!‌ಇದಕ್ಕೆ ದಂಡ ಹಾಕಲ್ವಾ..?

ಬೆಂಗಳೂರು: ದೀಪಾವಳಿ ಹಬ್ಬದ ದೀಪಾಲಂಕಾರಕ್ಕೆ ತಮ್ಮ ಮನೆಗೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿತ್ತು.

ಅನಧಿಕೃತವಾಗಿ ಕರೆಂಟ್​ ಬಳಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿ ದಂಡ ಪಾವತಿಸುವಾಗಿ ಹೇಳಿದ್ದರು. ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್​ ಕಚೇರಿ ಕಂಪೌಂಡ್​ಗಳಿಗೆ “ಕರೆಂಟ್​ ಕಳ್ಳ” ಎಂಬ ಪೋಸ್ಟರ್​ ಅಂಟಿಸಿದ್ದರು. ಇದರಿಂದ ಆಕ್ರೋಶಗೊಂಡ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಪಾಲುದಾರಿಕೆಯ ಲುಲು ಮಾಲ್​ನ ಆಸ್ತಿ ಮತ್ತು ಬಳಕೆ ಮಾಡಿರುವ ವಿದ್ಯುತ್​ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲುಲು ಮಾಲ್​ಗೆ 24 ಎಕರೆ ಖರಾಬು ಭೂಮಿಯನ್ನ ಕಬಳಿಸಲಾಗಿದೆ. 1934ರ ಭೂಮಿಯ ದಾಖಲೆಗಳನ್ನು ಸುಟ್ಟು ಹಾಕಿ ನಾಶ ಮಾಡಿದ್ದಾರೆ. ಅಕ್ರಮವಾಗಿ ತಿದ್ದುಪಡಿ ಮಾಡಿ ಭೂಮಿ ಕಬಳಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ. ಲುಲು ಮಾಲ್​​​ ಕಾಮಗಾರಿ ವೇಳೆ, ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ಬಿಲ್​ ನೀಡಿಲ್ಲ. ಆಗ ಲುಲು ಮಾಲ್​ಗೆ ಬಳಕೆ ಮಾಡಿದ್ದ ವಿದ್ಯುತ್​ಗೆ​​​​​ ದಂಡ ಹಾಕುತ್ತೀರಾ? ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್​ನಲ್ಲಿ ತೆಗೆದುಕೊಂಡು  ಹೋಗಿದ್ದಾರೆ. ಅದಕ್ಕೆ ಎಷ್ಟು ಹಣ ಕಟ್ಟಿದ್ದೀರಾ? ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್​ನಲ್ಲಿ ತಗೊಂಡು ಹೋದರಿ? ಜನರಿಗಾಗಿ ಮಾಡಿದ್ರಾ?  ಎಂದು ಆರೋಪಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top