ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯಾದ್ಯಂತ 14 ದಿನ ಕರ್ಫ್ಯೂ ಜಾರಿ ಮಾಡಿದ್ದು,ಇದರಿಂದ ಬೆಂಗಳೂರು ಬಿಟ್ಟು ಸ್ವಗ್ರಾಮಕ್ಕೆ ಹೊರಟಿದ್ದ ತಂದೆ-ಮಗ ಸೇರಿ ನಾಲ್ವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಕಾರು- ಲಾರಿ ನಡುವೆನ ಭೀಕರ ಅಪಘಾತದಲ್ಲಿ ಬಳ್ಳಾರಿಯ ಸಿರಗುಪ್ಪ ಬಳಿ ಸಾವನ್ನಪ್ಪಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ಬಸವರಾಜ ಭೀಮರಾವ ಬೆಳ್ಳೂರು (52), ಎಂಬಿಬಿಎಸ್ ವಿದ್ಯಾರ್ಥಿ ಭೀಮರಾವ ಬೆಳ್ಳೂರು(30), ಖಾಸಗಿ ಕಂಪನಿ ಉದ್ಯೋಗಿ, ಬಿಇ ಪದವೀಧರ ಸುನೀಲ ಶಿವರಾಜ ಪಾಟೀಲ(30) ಮತ್ತು ಕಾರು ಚಾಲಕ ರೇವಣಸಿದ್ದಪ್ಪ ಬಸವರಾಜ ಕೊರಡಂಪಳ್ಳಿ(30) ಮೃತ ದುರ್ದೈವಿಗಳು. ಇವರು ಚಿಂಚೋಳಿ ತಾಲೂಕಿನ ಚಿಮ್ಮಾದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು.
ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದರು. ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ೀ ಬಗ್ಗೆ ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



