Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವ ವಿದ್ಯಾಲಯ ಸ್ಥಾಪನೆಗೆ ಚಿಂತನೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಪ್ರಮುಖ ಸುದ್ದಿ

ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವ ವಿದ್ಯಾಲಯ ಸ್ಥಾಪನೆಗೆ ಚಿಂತನೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು : ಗುಜರಾತ್, ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಚಿಂತನೆ ನಡೆದಿದೆ ಎಂದು  ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ವಿಕಾಸಸೌಧದಲ್ಲಿ ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ  ಮಾತನಾಡಿದ ಅವರು,  ಆರೋಗ್ಯದ ದೃಷ್ಟಿಯಿಂದ ಸಾವಯವದತ್ತ ಜನರು ಹೆಚ್ಚು ವಾಲುತ್ತಿರುವುದರಿಂದ ಸಾವಯವ ಪದಾರ್ಥಗಳಿಗೆ ಹೆಚ್ಚು ಮಹತ್ವ ದೊರೆಯುತ್ತಿದೆ.ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಸಾವಯವ ಕೃಷಿ ವಿವಿ ಸ್ಥಾಪಿಸುವ ಬಗ್ಗೆ ಸಾವಯವ ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಕುರಿತು ಚಿಂತನೆ ನಡೆಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಮಾಹಿತಿ ನೀಡಿದರು. ಕೃಷಿ ಚಟುವಟಿಕೆಗಳಿಗೆ ಕೃಷಿ ಭೂಮಿಗೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕರ ಉತ್ಪನ್ನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದರು.

ಸಾವಯವ ಕೃಷಿಗಾಗಿ ಸಂಪನ್ಮೂಲ ವ್ಯಕ್ತಿಗಳನ್ನು ಹೆಚ್ಚಿಸಬೇಕು. ಮಾದರಿ ಸಂಪನ್ಮೂಲ ವ್ಯಕ್ತಿಗಳು ಕೃಷಿಕರಿಗೆ ಸಾವಯವ ಕುರಿತು ಇನ್ನಷ್ಟು ಮಾಹಿತಿ ನೀಡಬೇಕು. ಸಾವಯವ ಗೊಬ್ಬರವನ್ನು ಸರ್ಕಾರದ ಸಂಸ್ಥೆಗಳೇ ಪ್ರಮಾಣಿಕರಿಸುವಂತಾಗಬೇಕು. ಗುಣಮಟ್ಟದ ಪ್ರಮಾಣೀಕೃತ ಸಾವಯವ ಗೊಬ್ಬರ ತಯಾರಿಕೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ,ಕೃಷಿ ನಿರ್ದೇಶಕ ಶ್ರೀನಿವಾಸ್,ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವರಾಜ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top