ಪಕ್ಕದಲ್ಲಿ ಡಿಕೆ ಶಿವಕುಮಾರ್ ಕೂರಿಸಿಕೊಂಡು ಸಿದ್ಧರಾಮಯ್ಯ  ಭ್ರಷ್ಟಾಚಾರ ಪಾಠ: ಶ್ರೀರಾಮುಲು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ  ಸಚಿವ ಶ್ರೀರಮುಲು, ಭ್ರಷ್ಟ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶ್ರೀರಾಮುಲು ವ್ಯಂಗ್ಯವಾಡಿದರು .

ಮಸ್ಕಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ  ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಎಷ್ಟು ಲೂಟಿ ಮಾಡಿದ್ದಾರೆ. ಅವರ ಮೇಲೆ ಎಷ್ಟು ಕೇಸ್ ಗಳಿವೆ ಎಂಬುದು ಜನತೆಗೆ ಗೊತ್ತಿದೆ. ಇಂಥವರನ್ನು  ಪಕ್ಕದಲ್ಲೇ ಕೂರಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರವಾಗಿತ್ತು. ಎಲ್ಲ ಕಾಮಗಾರಿಗೆ 10 ಪರ್ಸೆಟ್ ತೆಗೆದುಕೊಳ್ಳುತ್ತಿತ್ತು.ಈಗ ಸಿಎಂ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರಲ್ಲ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *