ಶಿಕ್ಷಕ ವೃಂದದ ಸಿಆರ್​ಪಿ, ಬಿಆರ್​ಪಿ, ಶಿಕ್ಷಣ ಸಂಯೋಜಕ ಸೇರಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. 2023-24ನೇ ಸಾಲಿನ ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಸಿಆರ್​ಪಿ, ಬಿಆರ್​ಪಿ, ಶಿಕ್ಷಣ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಸ್ತೃತವಾದ ವೇಳಾಪಟ್ಟಿಯನ್ನು ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಡಿ.30 ರೊಳಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಡಿಡಿಪಿಐ ಕೊಟ್ರೇಶ್.ಜಿ ತಿಳಿಸಿದ್ದಾರೆ.

  • ಹುದ್ದೆ ವಿವರ
  • ಕ್ಲಸ್ಟರ್​ ಸಂಪನ್ಮೂಲ ವ್ಯಕ್ತಿಗಳು (ಸಿಆರ್​ಪಿ)
  • ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು
  • ತಾಂತ್ರಿಕ ಸಹಾಯಕರು
  • ಶಿಕ್ಷಣ ಸಂಯೋಜನಕರು
  • ಶಿಕ್ಷಣ ಸಂಯೋಜಕರು
  • ಕ್ಷೇತ್ರ ಸಂಪನ್ಮೂಲ ವ್ಯಕ್ತಿ
  • ಶಿಕ್ಷಣ ಸಂಯೋಜಕರು
  • ತಾಂತ್ರಿಕ ಸಹಾಯಕರು
  • ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ
  • ಸಹಾಯಕ ಯೋಜನಾ ಸಮನ್ವಯಾಧಿಕಾರಿ
  • ವಿಷಯ ಪರಿವೀಕ್ಷಕರು ಮತ್ತು ವಿಭಾಗೀಯ ಸಹ ನಿರ್ದೇಶಕರು
  • ಸಹಾಯಕ, ನಿರ್ದೇಶಕ

ವಿದ್ಯಾರ್ಹತೆ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಅನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕರ್ನಾಟಕ ಪ್ರೌಢಶಾಲಾ ಸಹಶಿಕ್ಷಕ/ ಟಿಜಿಟಿ ವೃಂದದಲ್ಲಿ ಅಥವಾ ಸಹ ಶಿಕ್ಷಕರಾಗಿ 10 ವರ್ಷಗಳ ಕಾಲ ಸೇವಾ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ಪ್ರಸ್ತುತ ಹುದ್ದೆ ಮತ್ತು ಸ್ಥಳದಲ್ಲಿ ಕನಿಷ್ಠ 3 ವರ್ಷಗಳ ಸೇವೆಯನ್ನು ಪೂರೈಸಿರಬೇಕು. ಪ್ರಸ್ತುತ ತಾಂತ್ರಿಕ ಸಹಾಯಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೂಡ ಲಿಖಿತ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 55 ವರ್ಷ ಮೀರಿರಬಾರದು.ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ನಿಗದಿಯಾಗಿರುವುದಿಲ್ಲ. ಹುದ್ದೆಯ ಸಂಪೂರ್ಣ ಅಧಿಸೂಚನೆ ಓದಿ, ಅರ್ಥೈಸಿಕೊಂಡು ಮುಂದುವರೆಯಬೇಕಿದೆ.ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಲಿಖಿತ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಡಿಸೆಂಬರ್​ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 30 ಆಗಿದೆ. ಈ ಹುದ್ದೆಗಳಿಗೆ ಫೆಬ್ರವರಿಗೆ 4 ಮತ್ತು 5ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು.ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಇನ್ನಿತರ ವಿವರಗಳಿಗೆ schooleducation.kar.nic.in ಭೇಟಿ ನೀಡಬಹುದಾಗಿದೆ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *