Connect with us

Dvgsuddi Kannada | online news portal | Kannada news online

ರಾಜ್ಯದ ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ರಾಜ್ಯದ ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https://pg.admission.kar.nic.in ಅಥವಾ ವಿಶ್ವವಿದ್ಯಾಲಯಗಳ ಅಂತರ್ಜಾಲತಾಣಗಳಲ್ಲಿ ಲಭ್ಯವಿರುವ ಸಾಮಾನ್ಯ ಸ್ನಾತಕೋತ್ತರ ಪ್ರವೇಶ ಮಾಹಿತಿ ಕಿರುಹೊತ್ತಿಗೆಯಲ್ಲಿ ವಿವರಗಳನ್ನು ಪಡೆದುಕೊಂಡು ಸೆ.09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೆ.ಶಿ.ನಾ.ಕೃ.ತೋ.ವಿ.ವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top