ತುಮಕೂರು: 25 ವರ್ಷದ ಯುವತಿ ಮದುವೆಯಾಗಿ ಸಿಕ್ಕಾಪಟ್ಟೆ ವೈರಲ್ ಸುದ್ದಿಯಾಗಿದ್ದ 50 ವರ್ಷದ ಶಂಕರಪ್ಪ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿಶಂಕರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಮೇಘನಾ (25) ಜೊತೆ ಮದುವೆಯಾಗಿದ್ದರು. ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆಯುತಿತ್ತು. ಶಂಕರಪ್ಪ ಸೋಮವಾರ ಮನೆ ಬಿಟ್ಟು ಹೋಗಿದ್ದು, ಇಂದು ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೇಘನಾ ಸ್ವತಃ ಶಂಕರಪ್ಪ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ 5 ವರ್ಷ ಆದರೂ ಮದುವೆಯಾಗದ ಶಂಕರಪ್ಪ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.



