Connect with us

Dvgsuddi Kannada | online news portal | Kannada news online

ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ; ಯಡಿಯೂರಪ್ಪ ಘೋಷಣೆ

ಪ್ರಮುಖ ಸುದ್ದಿ

ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ; ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ರ್ಪಧಿಸುವುದಿಲ್ಲ.ಬದಲಾಗಿ ನನ್ನ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳುವ ಮೂಲಕ ವಿಜಯೇಂದ್ರ‌ಬಗ್ಗೆ ಇದ್ದ‌ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ ರಾಜ್ಯದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಉಪ ಚುನಾವಣೆಯಲ್ಲಿ ಚುನಾವಣೆಯಲ್ಲು ಬಿಜೆಪಿ ಗೆಲುವಿನ ರೂವಾರಿಯಾಗಿದ್ದರು. ಅವರ ಈಗ ಎಲ್ಲಿಂದ ಶಾಸನ ಸಭೆ ಪ್ರವೇಶ ಮಾಡುತ್ತಾರೆ ಎನ್ನುವ ಬಗ್ಗೆ ಹಲವು ಚರ್ಚೆಗಳು, ಪ್ರಶ್ನೆಗಳು ಹೇಳಿ ಬಂದಿದ್ದವು. ಈ ಇದೀಗ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಯಡಿಯೂರಪ್ಪ ಅವರು, ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಿಂದಲೇ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ.

ಶಿಕಾರಿಪುರ ಯಡಿಯೂರಪ್ಪ ಅವರ ರಾಜಕೀಯ ಕರ್ಮ ಭೂಮಿ. ಅಲ್ಲಿಂದ ವಿಜಯೇಂದ್ರ ಸ್ಪಧಿಸಿದ್ದೇ ಆದರೆ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಯಡಿಯೂರಪ್ಪ ಅವರು ಚುನಾವಣೆಯಲ್ಲಿ ಸ್ಪಧಿಸಲ್ಲ ಎಂಬ ಮಾತ್ರಕ್ಕೆ ರಾಜಕೀಯ ನಿವೃತ್ತಿಯಲ್ಲ. ಅಂತಹ ಪ್ರಶ್ನೆಯೇ ಉದ್ಬವಿಸಲ್ಲ. ನಮ್ಮ ತಂದೆಯವರ ತೀರ್ಮಾನವನ್ನು ಪಾಲಿಸಲೇಬೇಕು ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ನೇರವಾಗಿ ವಿಪಕ್ಷಗಳಿಗೆ ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ. ಬಿಜೆಪಿಯನ್ನು ಸಂಘಟಿಸುವ ಕಾರ್ಯದಲ್ಲಿ ಅವರು ಸಕ್ರಿಯವಾಗಿ ತೊಡಗುತ್ತಾರೆ. ನಿವೃತ್ತಿ ಎಂಬುದು ಅವರ ಡಿಕ್ಷನರಿಯಲ್ಲೇ ಇಲ್ಲ ಎಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top