Connect with us

Dvgsuddi Kannada | online news portal | Kannada news online

ಸೋಲಾರ್ ಕೃಷಿ ಪಂಪ್‍ಸೆಟ್‍ ಅಳವಡಿಕೆಗೆ 1.50 ಲಕ್ಷ ರೂಪಾಯಿ ಸಹಾಯಧನ; ಅರ್ಜಿ ಸಲ್ಲಿಸುವುದು ಹೇಗೆ; ದಾಖಲೆ ಏನು ಬೇಕು..?

solar pumpset 1

ಕೃಷಿ ಖುಷಿ

ಸೋಲಾರ್ ಕೃಷಿ ಪಂಪ್‍ಸೆಟ್‍ ಅಳವಡಿಕೆಗೆ 1.50 ಲಕ್ಷ ರೂಪಾಯಿ ಸಹಾಯಧನ; ಅರ್ಜಿ ಸಲ್ಲಿಸುವುದು ಹೇಗೆ; ದಾಖಲೆ ಏನು ಬೇಕು..?

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ‌ ಪಂಪ್ ಸೆಟ್ ಗಳಿಗೆ ಸೌರಶಕ್ತಿ ಬಳಕೆ ಹೆಚ್ಚಿಸಲು ಮುಂದಾಗಿದ್ದು, ಪಿಎಂ ಕುಸುಮ್ ಯೋಜನೆಯಡಿ ಸೌರ ಚಾಲಿತ ಕೃಷಿ ಪಂಪ್‍ಸೆಟ್‍ Solar water pumpset (SWP) ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.‌ ಈ ಯೋಜನೆ ಅಳವಡಿಸಿಕೊಂಡ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಯೋಗದೊಂದಿಗೆ ಶೇ.50ರಷ್ಟು ಅಂದ್ರೆ 1.50 ಲಕ್ಷ ಸಹಾಯಧನ ಸಿಗಲಿದೆ.

ರೈತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿ ಜಾಲಮುಕ್ತ ಸೌರ ಶಕ್ತಿ ಚಾಲಿತ ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಳ್ಳಲು ರೈತರು ಅರ್ಜಿ ಹಾಕಬಹುದು. ಅರ್ಜಿಯನ್ನು ಕೆಆರ್ ಇಡಿಎಲ್ (KREDL) https://kredl.karnataka.gov.in ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು.

ಸೋಲಾರ್ ಪಂಪ್‌ಸೆಟ್ ಅಳವಡಿಸಲು ರಾಜ್ಯ ಸರ್ಕಾರದ ಸಹಾಯಧನ, ಕೇಂದ್ರ ಸರ್ಕಾರದ ಸಹಾಯಧನ ಹಾಗೂ ರೈತ ಫಲಾನುಭವಿಗಳ ವಂತಿಗೆಯ ವಿವರಗಳು. ನೋಂದಣಿಗಾಗಿ ರೈತರು ತಮ್ಮ ಆಧಾರ್, ಆರ್‌ಟಿಸಿ ( ಪಹಣಿ) ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್‌ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು

2023-24ನೇ ಸಾಲಿನ ನೂತನ ಯೋಜನೆಯಡಿ ಸೋಲಾರ್‌ ಪಂಪ್‌ಸೆಟ್‌ ಅಳವಡಿಕೆಗೆ ಹಾಗೂ ಯಂತ್ರೋಪಕರಣಗಳ ಖರೀದಿಗೆ ಉತ್ತಮ ಸಬ್ಸಿಡಿ ದೊರೆಯಲಿದೆ. ಯಂತ್ರೋಪಕರಣಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇಕಡಾ 50 ರಷ್ಟು ಸಹಾಯಧನ ದೊರೆಯಲಿದೆ. ಇತರೆ ವರ್ಗದವರಿಗೆ ಶೇಕಡಾ 40 ರಷ್ಟು ಸಬ್ಸಿಡಿ ದೊರೆಯಲಿದೆ.

ಇನ್ನು ಸೋಲಾರ್‌ ಆಧರಿತ 3 ಹೆಚ್‌ಪಿ ಸೋಲಾರ್‌ ಪಂಪ್‌ಸೆಟ್‌ಗಳಿಗೆ 2 ಲಕ್ಷವಾದರೆ ಶೇಕಡಾ 50ರಂತೆ ಒಂದು ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. ನ್ನು 3 ಹೆಚ್‌ಪಿ ಸೋಲಾರ್‌ ಗಿಂತ ಮೇಲ್ಪಟ್ಟ ಸೋಲಾರ್‌ ಪಂಪ್‌ಸೆಟ್‌ಗಳಿಗೆ 3 ಲಕ್ಷ ಖರ್ಚಿಗೆ 1.5ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ. ರೈತರು ಅಧಿಕೃತ ಸಂಸ್ಥೆಯಿಂದ ಮಾತ್ರ ಸೋಲಾರ್‌ ಪಂಪ್‌ಸೆಟ್‌ ಖರೀದಿಸಿರಬೇಕು.

ರೈತರು ಅಧಿಕೃತ ಸಂಸ್ಥೆಯಿಂದ ಮಾತ್ರ ಸೋಲಾರ್‌ ಪಂಪ್‌ಸೆಟ್‌ ಖರೀದಿಸಿರಬೇಕು. ಅರ್ಜಿ ಸಲ್ಲಿಸಲು ಅರ್ಹ ರೈತರು ಸ್ಥಳೀಯ ತಾಲೂಕಿನ ತೋಟಗಾರಿಕಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬೇಕಾಗುತ್ತದೆ.

ಸಹಾಯಧನಕ್ಕೆ ಸಲ್ಲಿಸಬೇಕಾದ ದಾಖಲೆ: ಆಧಾರ್‌ ಕಾರ್ಡ್‌ ಪ್ರತಿ, ಬ್ಯಾಂಕ್‌ ಪಾಸ್‌ಬುಕ್‌ ಪ್ರತಿ, ಎಫ್‌ಐಡಿ ಸಂಖ್ಯೆ, ಆರ್‌ಟಿಸಿ, ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಕಡ್ಡಾಯವಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕೃಷಿ ಖುಷಿ

To Top