ವೀಕೆಂಡ್ ಕರ್ಫ್ಯೂ; ರಾಜ್ಯದ ಎಲ್ಲಾ ಶಾಲೆಗಳಿಗೆ‌ ನಾಳೆ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಇಂದಿನಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಜ.19ರವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ರಾತ್ರಿಯಿಂದ‌ ರಾಜ್ಯದ‌ ಎಲ್ಲಾ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಹೀಗಾಗಿ‌ ನಾಳೆ (ಜ.8) ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿ ಆದೇಶ‌ ಹೊರಡಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರಕಟಣೆ ಹೊರಡಿಸಿದ್ದು, ಓಮಿಕ್ರಾನ್, ಕೊರೊನಾ ನಿಯಂತ್ರಣದ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ರಾತ್ರಿ 10 ಗಂಟೆಯಿಂದ, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾಧ್ಯಂತ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿಸೆ. ಈ ಅವಧಿಯಲ್ಲಿ ಶನಿವಾರಗಳಂದು ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ನಡೆಸದಿರಲು ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರುಗಳಿಗೆ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *