Connect with us

Dvgsuddi Kannada | online news portal | Kannada news online

ನ. 14 ರಂದು ಕೇಂದ್ರ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ 38ನೇ ಪುಣ್ಯ ಸ್ಮರಣೆ

ದಾವಣಗೆರೆ

ನ. 14 ರಂದು ಕೇಂದ್ರ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ 38ನೇ ಪುಣ್ಯ ಸ್ಮರಣೆ

ಡಿವಿಜಿ ಸುದ್ದಿ, ದಾವಣಗೆರೆ:  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಸಂಸ್ಥೆ ವತಿಯಿಂದ  ಕೇಂದ್ರ  ಮಾಜಿ ಸಚಿವ ಕೊಂಡಜ್ಜಿ ಬಸಪ್ಪನವರ 38ನೇ ಪುಣ್ಯ ಸ್ಮರಣೆಯನ್ನು ನ.14 ರಂದು ಬೆಳಿಗ್ಗೆ 9 ಗಂಟೆಗೆ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ  ‘ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್ ಗೈಡ್’ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷ ಕೊಂಡಜ್ಜಿ ಬಿ ಷಣ್ಮುಖಪ್ಪ, ಜಿಲ್ಲಾ ಸಂಸ್ಥೆ ಪದಾಧಿಕಾರಿಗಳು ಹಾಗೂ ನಿಯಮಿತ ಸ್ಕೌಟ್ಸ್ ಮಾಸ್ಟರ್ಸ್, ಗೈಡ್ ಕ್ಯಾಪ್ಟನ್ಸ್, ರೋವರ್ಸ್, ರೇಂಜರ್ಸ್, ಸ್ಕೌಟ್ಸ್, ಗೈಡ್ಸ್ ಮಕ್ಕಳು ಭಾಗವಹಿಸಲಿದ್ದಾರೆಂದು ದಿ ಭಾರತ್ ಸ್ಕೌಟ್ ಮತ್ತು ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top