Connect with us

Dvgsuddi Kannada | online news portal | Kannada news online

ಚಿತ್ರ ಸಾಹಿತಿ ಕೆ.ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕ್ರೈಂ ಸುದ್ದಿ

ಚಿತ್ರ ಸಾಹಿತಿ ಕೆ.ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

ಡಿವಿಜಿ ಸುದ್ದಿ, ಕೊಪ್ಪಳ: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ಕೋರ್ಟ್ ಗೆ  ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ.  ತಕ್ಷಣವೇ  ಆಸ್ಪತ್ರೆಗೆ ದಾಖಲಾಗಿದೆ. ಆದರೆ,  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎನ್ನುವರಿಂದ ಮೂರು ಲಕ್ಷ ವಂಚನೆ ಕೇಸ್ ನಲ್ಲಿ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ ಕುಲಕರ್ಣಿ ವಿರುದ್ಧ ಕೇಸ್ ದಾಖಲಾಗಿತ್ತು.  ಈ ಪ್ರಕರಣದ ವಿಚಾರಣೆ ಇಂದು ನಡೆಯುತ್ತಿತ್ತು, ಈ ವೇಳ ಘಟನೆ ನಡೆದಿದೆ.

ಚಿತ್ರ ಸಾಹಿತಿ ಕಲ್ಯಾಣ್ ಪತ್ನಿ ಅಶ್ವಿನಿಯನ್ನು  ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಿಸಲಾಗಿತ್ತು. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಎಂಬವರ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆದಿದ್ದರು. ಸದ್ಯ ಪತಿ ವಿರುದ್ಧ ನೀಡಿರುವ ವಿಚ್ಛೇದನ ಹಿಂಪಡೆಯುವುದಾಗಿ ಅಶ್ವಿನಿ ತಿಳಿಸಿದ್ದು, ಪ್ರಕರಣ ಸುಖಾಂತ್ಯ ಕಂಡಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top