ಬೆಂಗಳೂರು: ರಾಜಕೀಯ ಪ್ರೇರಿತ ಮೀಸಲಾತಿಗಳು ಹಾಗೂ ಎಲ್ಲರಿಗೂ ಮೀಸಲಾತಿ ಬೇಕು ಎನ್ನುವುದು ಯಾವುದೇ ಸಮಾಜಕ್ಕೆ ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರೇರಿತ ಮೀಸಲಾತಿ ಹೋರಾಟ ಸಮಾಜ ಹಾಗೂ ಆಡಳಿತಕ್ಕೆ ತೊಂದರೆ ಉಂಟು ಮಾಡುತ್ತದೆ. ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದರು.
ಈಗಾಗಲೇ ಆರ್ಥಿಕವಾಗಿ ಹಿಂದಿಳುದಿರುವವರಿಗೆ ಶೇ.10 ಪ್ರತಿಶತ ಮೀಸಲಾತಿ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಯಾರು ಹಿಂದುಳಿದಿದವರಿಗೆ ಮೀಸಲಾತಿ ನೀಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.
ಕರ್ನಾಟದಲ್ಲಿ ವಿರೋಧ ಪಕ್ಷ ಇದೆಯೇ ಎಂದು ಪ್ರಶ್ನೆ ಮಾಡಿದ ಅವರು, ಕಾಂಗ್ರೆಸ್ನಲ್ಲೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಇದೆ. ಅರ್ಹತೆ ಇರುವವರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ನೀಡಬೇಕು ಎನ್ನುವುದು ಸರಿ ಇದೆ. ಆದರೆ, ಇದರ ಮಾನಂದಡಗಳ ಬಗ್ಗೆ ಮತ್ತಷ್ಟು ವಿಸ್ತೃತವಾದ ಚರ್ಚೆ ಆಗಬೇಕಿದೆ ಎಂದರು.



