Connect with us

Dvgsuddi Kannada | online news portal | Kannada news online

ರಾಜಕೀಯ ಪ್ರೇರಿತ ಮೀಸಲಾತಿ ಸಮಾಜಕ್ಕೆ ಒಳ್ಳೆದಲ್ಲ; ಕೇಂದ್ರ ಸಚಿವ ಸದಾನಂದ ಗೌಡ

ಪ್ರಮುಖ ಸುದ್ದಿ

ರಾಜಕೀಯ ಪ್ರೇರಿತ ಮೀಸಲಾತಿ ಸಮಾಜಕ್ಕೆ ಒಳ್ಳೆದಲ್ಲ; ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು: ರಾಜಕೀಯ ಪ್ರೇರಿತ ಮೀಸಲಾತಿಗಳು ಹಾಗೂ ಎಲ್ಲರಿಗೂ ಮೀಸಲಾತಿ ಬೇಕು ಎನ್ನುವುದು ಯಾವುದೇ ಸಮಾಜಕ್ಕೆ ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರೇರಿತ ಮೀಸಲಾತಿ ಹೋರಾಟ ಸಮಾಜ ಹಾಗೂ ಆಡಳಿತಕ್ಕೆ ತೊಂದರೆ ಉಂಟು ಮಾಡುತ್ತದೆ.  ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದರು.

ಈಗಾಗಲೇ ಆರ್ಥಿಕವಾಗಿ ಹಿಂದಿಳುದಿರುವವರಿಗೆ ಶೇ.10 ಪ್ರತಿಶತ ಮೀಸಲಾತಿ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಯಾರು ಹಿಂದುಳಿದಿದವರಿಗೆ  ಮೀಸಲಾತಿ ನೀಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.

ಕರ್ನಾಟದಲ್ಲಿ ವಿರೋಧ ಪಕ್ಷ ಇದೆಯೇ ಎಂದು ಪ್ರಶ್ನೆ ಮಾಡಿದ ಅವರು,  ಕಾಂಗ್ರೆಸ್‌ನಲ್ಲೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಇದೆ. ಅರ್ಹತೆ ಇರುವವರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ನೀಡಬೇಕು ಎನ್ನುವುದು ಸರಿ ಇದೆ. ಆದರೆ, ಇದರ ಮಾನಂದಡಗಳ ಬಗ್ಗೆ ಮತ್ತಷ್ಟು ವಿಸ್ತೃತವಾದ ಚರ್ಚೆ ಆಗಬೇಕಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top