Connect with us

Dvgsuddi Kannada | online news portal | Kannada news online

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪದವಿ ಪ್ರವೇಶಾತಿ ಪ್ರಾರಂಭ

ಪ್ರಮುಖ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪದವಿ ಪ್ರವೇಶಾತಿ ಪ್ರಾರಂಭ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಅವೃತ್ತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್, ಐಎಸ್‍ಸಿ, ಬಿಸಿಎ, ಬಿಬಿಎ, ಬಿಸಿಎ, ಎಂ.ಎ/ಎಂ.ಕಾಂ, ಎಂ.ಎ/ಎಂ.ಸಿ.ಜೆ, ಎಂ.ಲಿಬ್‍ಎಸ್‍ಸಿ, ಎಂ.ಬಿ.ಎ, ಎಂ.ಎಸ್‍ಸಿ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ ಡಿಪ್ಲೋಮಾ, ಡಿಪ್ಲೊಮೊ, ಸರ್ಟಿಫಿಕೆಟ್ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂನ್.20 ರಿಂದ ಪ್ರಾರಂಭವಾಗಿದೆ.

ಆಸಕ್ತ ವಿದ್ಯಾರ್ಥಿಗಳು ಕ.ರಾ.ಮು.ವಿ.ಯ ಅಧಿಕೃತ ವೆಬ್‍ಸೈಟ್ www.ksoumysuru.ac.in ಮೂಲಕ ಮೇಲ್ಕಂಡ ಪದವಿ, ಕೋರ್ಸಗಳಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮೂಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶ ಪಡೆಯಬಹುದಾಗಿದೆ. ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್‍ಮನ್ ವಿದ್ಯಾರ್ಥಿಗಳಿಗೆ ಹಾಗೂ ಆಟೋ, ಕ್ಯಾಬ್ ಚಾಲಕರುಗಳ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಕೊವೀಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತಿಯ ಲಿಂಗಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ ಕೋರ್ಸ್‍ಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ, ಇದರ ಸದುಪಯೋಗವನ್ನು ಪಡೆದುಕೊಳ್ಳುಬಹುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 9916009318, 8095939359, 6363739884, 9008905457 ಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಕ.ರಾ.ಮು.ವಿ.ಯ ಪ್ರಾದೇಶಿಕ ನಿರ್ದೇಶಕ ಡಾ. ವಿಜಯ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top