ಡಿವಿಜಿ ಸುದ್ದಿ, ಬೆಂಗಳೂರು : ದೀಪಾವಳಿ ಹಬ್ಬಕ್ಕೆ KSRTC ಹೆಚ್ಚುವರಿಯಾಗಿ 1000 ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲ ಕಲ್ಪಿಸಿದೆ. ನ. 13 ಮತ್ತು 14 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ KSRTC ನರಕ ಚತುರ್ದಶಿ, ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 13-11-2020 ಹಾಗೂ 14-11-2020ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಿಶೇಷ ಬಸ್ ಸಂಚರಿಸಲಿವೆ.
ರಾಜ್ಯದ ವಿವಿಧ ಸ್ಥಳಗಳಿಗೆ ಮಾತ್ರವಲ್ಲದೆ, ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 16-11-2020ರಂದು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರಿಗೆ ಬಸ್ ಪ್ರಯಾಣಿಕರು ಈ ಸೇವೆಯನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.



