ಕೆಎಸ್​ಆರ್​ಟಿಸಿ ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನೌಕರ; ಕಾರಣ ಏನು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ಕೆಲಸದೊತ್ತಡ ಹಾಗೂ ಡ್ಯೂಟಿ ಬದಲಾಯಿಸಿದ್ದಕ್ಕೆ ಮನನೊಂದ ಕೆಎಸ್​​ಆರ್​ಟಿಸಿ ಬೆಳಗಾವಿ ಡಿಪೋ ಮೆಕ್ಯಾನಿಕ್​ ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತೆ ನೀಡಲು ಕ್ರಮ; ಸಚಿವ ಪ್ರಿಯಾಂಕ್‌ ಖರ್ಗೆ

ಮೆಕ್ಯಾನಿಕ್ ಕೇಶವ ಕಮಡೊಳ್ಳಿ (57) ಮೃತ ನೌಕರ. ಮೃತ ಕೇಶವ ಕಮಡೊಳ್ಳಿ ಬೆಳಗಾವಿಯ ನಿವಾಸಿಯಾಗಿದ್ದು, ಕೆಎಸ್​​ಆರ್​ಟಿಸಿ ಬಸ್​ ವಾಶಿಂಗ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್​​ ಕೆಲಸಕ್ಕೆ ಬದಲಾಯಿದ್ದರು. ಇದರಿಂದ ಮನನೊಂಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ: ವಿವಿಧ ಕಡೆ ಬೈಕ್ ಕಳ್ಳತನ ಆರೋಪಿ ಬಂಧನ; 4.80 ಲಕ್ಷ ಮೌಲ್ಯದ ಆರು ಯಮಹಾ Rx ಬೈಕ್ ವಶ

ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಡ್ಯೂಟಿ ಬದಲಿಸಲಾಗಿತ್ತು. ಡ್ಯೂಟಿ ಬದಲಿಸಿದ್ದಕ್ಕೆ ಮತ್ತು ಕೆಲಸದ ಒತ್ತಡ ತಡೆದುಕೊಳ್ಳಲು ಆಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *