ಬೆಂಗಳೂರು : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರ ಮುಂದುವರೆದ ಹಿನ್ನೆಲೆ ರಾಜ್ಯದಲ್ಲಿ ಎಸ್ಮಾ ಜಾರಿಗೊಳಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಮಕರ್ನಾಟಕದಲ್ಲಿ ಈ ಹಿಂದೆ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿಗೆ ಮಾಡುವ ಚಿಂತನೆ ಇದೆ.
ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರು ಸಂಧಾನದಲ್ಲಿ ಒಪ್ಪಿಗೆ ಕೊಟ್ಟಿದ್ದರು. ಅವರ ಎಲ್ಲಾ ಬೇಡಿಕೆಗೆ ಒಪ್ಪಿದ್ದೆವು. ನೌಕರರು ಬಸ್ ಸಂಚಾರ ಆರಂಭಿಸುವುದಾಗಿ ಒಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತು ಕೇಳಿ ಬದಲಾಗಿದ್ದಾರೆ, ಕೋಡಿಹಳ್ಳಿ ಚಂದ್ರಶೇಖರ್ ಬ್ಲಾಕ್ ಮೇಲ್ ತಂತ್ರ ಬಳಸುತ್ತಿದ್ದಾರೆ ಎಂದಿದ್ದಾರೆ.



