Connect with us

Dvgsuddi Kannada | online news portal | Kannada news online

ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು; ಸರ್ಕಾರಕ್ಕೆ ಮೂರು ತಿಂಗಳ ಗಡುವು ..!

ಪ್ರಮುಖ ಸುದ್ದಿ

ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು; ಸರ್ಕಾರಕ್ಕೆ ಮೂರು ತಿಂಗಳ ಗಡುವು ..!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಲಿಖಿತಾ ರೂಪದಲ್ಲಿ ಹೇಳಿದ ಹಿನ್ನೆಲೆ ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿ ಮುಷ್ಕರ ವಾಪಸ್ ಪಡೆದಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ನಾಲ್ಕೂ ಸಾರಿಗೆ ನಿಗಮಗಳ ನೌಕರರು ಮುಷ್ಕರ ಆರಂಭಿಸಿದ್ದರು. ಹೀಗಾಗಿ ಇಡೀ ರಾಜ್ಯಾದ್ಯಂತ ಸಾರ್ವಜನಿಕ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಇದೀಗ ಸಾರಿಗೆ ಇಲಾಖೆ ಸಿಬ್ಬಂದಿ ತಮ್ಮ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದು, ಸರ್ಕಾರಿ ಬಸ್‌ಗಳು ರಸ್ತೆಗೆ ಇಳಿದಿವೆ.

ಸಾರಿಗೆ ನೌಕರರ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಲಿಖಿತ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ವಾಪಾಸ್ ಪಡೆಯಲಾಗಿದ್ದು, ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಗಡುವು ಕೊಡಲಾಗಿದೆ.
ಇದೀಗ ಮುಷ್ಕರ ಅಂತ್ಯಗೊಂಡಿದ್ದನ್ನು ಅಧಿಕೃತವಾಗಿ ಪ್ರಕಟಿಸುವ ಮೂಲಕ ಎಲ್ಲ ಗೊಂದಲಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತೆರೆ ಎಳೆದಿದ್ದಾರೆ.

ಸಾರಿಗೆ ಇಲಾಖೆ ನೌಕರರು ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಡೆಸಿದ್ದ ಮುಷ್ಕರ ತಾರ್ಕಿಕ ಅಂತ್ಯ ಕಂಡಿದ್ದರೂ ಸರ್ಕಾರಕ್ಕೆ ಸಿಬ್ಬಂದಿ ಸರ್ಕಾರಕ್ಕೆ ಗಡುವು ಕೊಟ್ಟಿದ್ದಾರೆ. 6ನೇ ಆಯೋಗದ ಕುರಿತು ಸರ್ಕಾರದ ಭರವಸೆಯಲ್ಲಿ ಗೊಂದಲವಿದೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಸಾರಿಗೆ ಸಚಿವರು ಬಂದು ಸ್ಪಷ್ಟನೆ ಕೊಡಬೇಕು ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದರು.

ಸರ್ಕಾರದಿಂದ ಲಿಖಿತ ರೂಪದಲ್ಲಿ ಭರವಸೆ ಕೊಡುವಂತೆ ಮುಷ್ಕರ ನಿರತರು ಪಟ್ಟು ಹಿಡಿದಿದ್ದರು ಅದಕ್ಕೆ ಸರ್ಕಾರ ಕೂಡ ಲಿಖಿತ ರೂಪದಲ್ಲಿಯೇ ಭರವಸೆಯನ್ನು ಕೊಟ್ಟಿತು. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅವರು ಫ್ರೀಡಂ ಪಾರ್ಕ್‌ಗೆ ತೆರಳಿ ಲಿಖಿತವಾಗಿ ಸರ್ಕಾರದ ಭರವಸೆಗಳನ್ನು ಕೊಟ್ಟು ಬಂದರು. ಆದರೂ ಮುಷ್ಕರ ನಿರತರು ಒಪ್ಪಲಿಲ್ಲ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ದೂರವಾಣಿ ಕರೆ ಮಾಡಿ ಮುಷ್ಕರ ನಿರತರ ಗೊಂದಲವನ್ನು ಪರಿಹರಿಸಿದರು.

ಸರ್ಕಾರಕ್ಕೆ ಸ್ವಲ್ಪ ಕಲಾವಕಾಶವನ್ನು ಕೊಡೋಣ ಎಂದು ನೇತೃತ್ವ ವಹಿಸಿಕೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಪ್ರತಿಭಟನಾ ‌ನಿರತರನ್ನು ಮನವೊಲಿಸಿದರು. ನಾಲ್ಕು ದಿನಗಳ ಬಳಿಕ ಇದೀಗ ನಾಲ್ಕೂ ನಿಗಮಗಳ ಬಸ್‌ಗಳು ರಸ್ತೆಗೆ ಇಳಿದಿವೆ. ಹೀಗಾಗಿ ಇಡೀ ರಾಜ್ಯಾದ್ಯಂತ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿಯೂ ಬಿಎಂಟಿಸಿ ಸೇವೆ ಪುನಾರಂಭವಾಗಿದ್ದು, ಹೆಚ್ಚಿನ ಬಸ್‌ಗಳನ್ನು ಓಡಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಉಳಿದಂತೆ ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಹಾಗೂ ಕೆಸ್‌ಆರ್‌ಟಿಸಿ ಬಸ್‌ಗಳು ಕೂಡ ರಸ್ತೆಗೆ ಇಳಿದಿವೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top