Connect with us

Dvgsuddi Kannada | online news portal | Kannada news online

ಕುರುಬ  ಸಮುದಾಯನ್ನು ಎಸ್ ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸಿ ಅ. 11 ರಂದು ಪೂರ್ವಭಾವಿ ಸಭೆ

ರಾಜ್ಯ ಸುದ್ದಿ

ಕುರುಬ  ಸಮುದಾಯನ್ನು ಎಸ್ ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸಿ ಅ. 11 ರಂದು ಪೂರ್ವಭಾವಿ ಸಭೆ

ಡಿವಿಜಿ ಸುದ್ದಿ, ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕಿದ್ದು, ಅ.11ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಕಾಗಿನೆಲೆಯ ಶ್ರೀ ರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಎಸ್.ಟಿ ಹೋರಾಟ ಸಮಿತಿಯಿಂದ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಬಹಳ ದಿನಗಳ ಬೇಡಿಕೆಗೆ ಹೋರಾಟ ರೂಪಿಸಬೇಕಿದೆ. ತಿಂಗಳ 11ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಹೋರಾಟದ ಬಗ್ಗೆ ರೂಪುರೇಷ ಸಿದ್ಧಪಡಿಸಲಾಗುವುದು.‌ ಈ ಹೋರಾಟದಿಂದ ಎಸ್‌ಟಿ  ಸಮುದಾಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಎಲ್ಲ ಹಿಂದುಳಿದ ವರ್ಗಗಳನ್ನು  ಒಟ್ಟಿಗೆ ಮೇಲಕ್ಕೆತ್ತಬೇಕೆಂಬುದೇ ನಮ್ಮ ಉದ್ದೇಶ. ಎಸ್‌ಟಿ ಸಮುದಾಯಕ್ಕೆ ಸೇರಿರುವ ಸಮುದಾಯಗಳು ಶೇ.3ರ ಬದಲಿಗೆ 7% ಮೀಸಲಾತಿ ಕೇಳುತ್ತಿದ್ದಾರೆ. ಅದಕ್ಕೆ ನಮ್ಮ ಸಹಮತವಿದೆ ಎಂದರು.

ಸಮಾಜದ ಮುಖಂಡ ಎಚ್.ಎಂ ರೇವಣ್ಣ ಮಾತನಾಡಿ, ಮೊದಲಿನಿಂದಲೂ ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಹೋರಾಟ ನಡೆಯುತ್ತಿದೆ. ನಮ್ಮ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಆಗಿರಲಿಲ್ಲ. ಈಗ ಸಚಿವ ಕೆ.ಎಸ್ ಈಶ್ವರಪ್ಪ ಇದರ‌ ನೇತೃತ್ವ ವಹಿಸಿದ್ದಾರೆ. ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ನಮ್ಮ ಹಕ್ಕು ಪಡೆಯಲು ವೇದಿಕೆ ಸಿದ್ಧಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಚಿವ ಕೆ.ಎಸ್‌ ಈಶ್ವರಪ್ಪ, ಮಾಜಿ ಸಂಸದ ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top