Connect with us

Dvgsuddi Kannada | online news portal | Kannada news online

ರಾಜಕೀಯ ಒತ್ತಡದ ಮೂಲಕ ಎಸ್ ಟಿ  ಮೀಸಲಾತಿ ಪಡೆಯಬೇಕಿದೆ: ಸಚಿವ ಕೆ.ಎಸ್. ಈಶ್ವರಪ್ಪ  

ಪ್ರಮುಖ ಸುದ್ದಿ

ರಾಜಕೀಯ ಒತ್ತಡದ ಮೂಲಕ ಎಸ್ ಟಿ  ಮೀಸಲಾತಿ ಪಡೆಯಬೇಕಿದೆ: ಸಚಿವ ಕೆ.ಎಸ್. ಈಶ್ವರಪ್ಪ  

ದಾವಣಗೆರೆ: ರಾಜಕೀಯ ಒತ್ತಡ ಇಲ್ಲದಿದ್ದರಿಂದ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಸಿಕ್ಕಿಲ್ಲ. ಹೀಗಾಗಿ ಹೋರಾಟದ ಮೂಲಕ ನಾವು ಮೀಸಲಾತಿ ಹಕ್ಕು ಪಡೆಯಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಜಿಲ್ಲೆಯ  ಬೆಳ್ಳೂಡಿ ಶಾಖಾ ಮಠದಲ್ಲಿ ನಡೆಯುತ್ತಿರುವ ಕುರುಬ ಎಸ್ಟಿ ಮೀಸಲಾತಿ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು,  ಪ್ರಧಾನಿಗೆ ಕುರುಬ ಸಮಾಜದ ಬೇಡಿಕೆ ಅರ್ಥೈಸುವ ಪ್ರಯತ್ನ ಮಾಡಿದ್ದೇವೆ. ಪ್ರಧಾನಿ ಮೋದಿಯವರ ಕಿವಿಗೂ ನಮ್ಮ ಹೋರಾಟ ಮುಟ್ಟಬೇಕು. ಕುರುಬರ ಎಸ್ಟಿ ಮೀಸಲು ಹೋರಾಟ ಯಾವ ಜನಾಂಗದ ವಿರುದ್ಧ ಅಲ್ಲ. ಎಸ್ಟಿ ಅರ್ಹತೆ ಹೊಂದಿರುವ ಎಲ್ಲ ಸಮಾಜಗಳ ಪರವಾಗಿ ನಾವು  ಹೋರಾಟ ಮಾಡುತ್ತೇವೆ. ಇದೀಗ ನಮ್ಮ ಶಕ್ತಿ ಪ್ರದರ್ಶನ ಆಗತ್ಯತೆ ಇದೆ  ಎಂದು ತಿಳಿಸಿದರು.

ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಪ್ರಾರಂಭವಾಗಲಿದ್ದು,  ಫೆ. 7ರಂದು ಬೆಂಗಳೂರಿನಲ್ಲಿ ಎಸ್ಟಿ ಹೋರಾಟ ಸಮಾವೇಶ ನಡೆಯಲಿದೆ. ಈ ಹೋರಾಟದಲ್ಲಿ ಕನಿಷ್ಠ 10 ಲಕ್ಷ ಜನ ಬೆಂಗಳೂರಲ್ಲಿ ಸೇರಬೇಕು ಎಂದು ಕರೆ ನೀಡಿದರು. ಮಾರ್ಚ್‌ ತಿಂಗಳಲ್ಲಿ ಒಡೆಯರ ಕುಲದವರಿಗೆ ರಾಜ್ಯಮಟ್ಟದ ಪ್ರತ್ಯೇಕ ಸಮಾವೇಶ ನಂತರ, ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಒಡೆಯರ ಅಭಿವೃದ್ಧಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಪ್ರಯತ್ನ ಮಾಡಲಾಗಲಾಗುವುದು. ಎಸ್ಟಿ ಮೀಸಲು ದೊರೆಯುವವರೆಗೂ ಹೋರಾಟ ನಿರಂತರ ಎಂದು ತಿಳಿಸಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top