Connect with us

Dvgsuddi Kannada | online news portal | Kannada news online

ಎಸ್ ಟಿ  ಮೀಸಲಾತಿಗೆ ಆಗ್ರಹಿಸಿ ಜ.15 ರಿಂದ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಪಾದಯಾತ್ರೆ :ಕಾಗಿನೆಲೆ ಶ್ರೀ

ಪ್ರಮುಖ ಸುದ್ದಿ

ಎಸ್ ಟಿ  ಮೀಸಲಾತಿಗೆ ಆಗ್ರಹಿಸಿ ಜ.15 ರಿಂದ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಪಾದಯಾತ್ರೆ :ಕಾಗಿನೆಲೆ ಶ್ರೀ

ಡಿವಿಜಿ ಸುದ್ದಿ, ದಾವಣಗೆರೆ: ಡಿವಿಜಿ ಸುದ್ದಿ, ದಾವಣಗೆರೆ: ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿ ಸೇರಿಸುವಂತೆ ಆಗ್ರಹಿಸಿ ಜನವರಿ 15 ರಿಂದ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಕಾಗಿನಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ  ಹರಿಹರ ತಾಲೂಕಿನ ಬೆಳ್ಳೂಡಿಯ ಕಾಗಿನೆಲೆ ಗುರುಪೀಠದ ಶಾಖಾ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿದರು.  ಹಾವೇರಿ ಜಿಲ್ಲೆಯ ಕಾಗಿನಲೆ ಗುರುಪೀಠದಿಂದ ಜ.15 ರಂದು ಬೆಂಗಳೂರಿಗೆ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಪಾದಯಾತ್ರೆಗೂ ಮುನ್ನ ರಾಜ್ಯದ ನಾಲ್ಕು ಕಡೆ ಸಮಾವೇಶ ನಡೆಸಲಾಗುವುದು ಎಂದರು.

ದಾವಣಗೆರೆ, ಗುಲ್ಬರ್ಗ, ಮೈಸೂರು, ಬಾಗಲಕೋಟೆಯಲ್ಲಿ ಸಮಾವೇಶ ನಡೆಸಲಾಗುವುದು ಈ ಬಗ್ಗೆ  ಸಮಾಜ ಬಾಂಧವರೊಂದಿಗೆ ಚರ್ಚಿಸಲಾಗಿದೆ. ನವೆಂಬರ್ 8 ಕ್ಕೆ ಹಾವೇರಿಯ ಕಾಗಿನಲೆಯಲ್ಲಿ ಮಹಿಳಾ ಸಮವೇಶ ಜರುಗಲಿದೆ. ಪಾದಯಾತ್ರೆ ನಂತರ ಬೆಂಗಳೂರಿನಲ್ಲಿ ಫೆಬ್ರವರಿ 7 ರಂದು ಬೃಹತ್ ಸಮಾವೇಶ ಮಾಡಲು ಸಿದ್ದತೆಗಳು ನಡೆದಿದೆ. ಕುರುಬ ಸಮಾಜವನ್ನು ಎಸ್ ಟಿ ಗೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಹತ್ತು ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು.ಈ ವೇಳೆ ಮಾಜಿ ಸಚಿವ ಎಚ್. ಎಂ. ರೇವಣ್ಣ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top