ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾದಿಂದ ಕೆಲ ಕೇಂದ್ರ ಸಚಿವರು, ಸಂಸದರು ನಿಧನ ಆದರೂ ಅಂತ ಲೋಕಸಭೆ ಮುಚ್ಚಕ್ಕಾಗುತ್ತಾ? ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಹಾಗಂತ ಉಳುಮೆ ಮಾಡುವುದನ್ನು ನಿಲ್ಲಿಸಿಲ್ಲ. ವಿದ್ಯಾಗಮ ಯೋಜನೆಗೂ ಕೋವಿಡ್ ಗೂ ಸಂಬಂಧ ಇಲ್ಲ. ಈ ಯೋಜನೆ ಎಲ್ಲ ಕೋವಿಡ್ ಬಂದಿದೆ. ಕೊರೊನಾ ಬಂತು ಅಂತ ಯೋಜನೆ ನಿಲ್ಲಿಸಕ್ಕಾಗುತ್ತಾ ಎಂದದರು.
ರಾಜ್ಯದಲ್ಲಿ ಶಾಲೆಗಳ ಆರಂಭ ಮಾಡಬೇಕಾ ಬೇಡವಾ ಅನ್ನುವ ಚರ್ಚೆ ನಡೀತಿದೆ. ಶಾಲಾರಂಭ ಬಗ್ಗೆ ಸರ್ಕಾರ ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ. ಪೋಷಕರು, ತಜ್ಞರ ಜೊತೆ ಸರ್ಕಾರ ಚರ್ಚೆ ಮಾಡ್ತಿದೆ. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತಗೊಳ್ಳುತ್ತೆ. ಶಾಲೆ ಆರಂಭ ಬೇಡ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.



