ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಿಎಂಗೆ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಸಾಥ್ ನೀಡಿದರು. ಚಿತ್ರದುರ್ಗದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದರು. ಆ ಬಳಿಕ ಅವರನ್ನು ಚಿತ್ರದುರ್ಗದಲ್ಲಿ ಚಿಕಿತ್ಸೆಗೆ ಆಂಬುಲೆನ್ಸ್ನಲ್ಲಿ ಜೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು. ಚಿತ್ರದುರ್ಗದ ಹೋಟೆಲ್ ನವೀನ್ ರೀಜೆನ್ಸಿಗೆ ಮಧ್ಯಾಹ್ನ 1.45ಕ್ಕೆ ಊಟಕ್ಕೆ ತೆರಳಿದ್ದರು. ಕಾರಿನಿಂದ ಕೆಳಗಿಳಿದಾಗ ಸಚಿವರು ಕುಸಿದುಬಿದ್ದರು.



