Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನ ಕೇವಲ ಶಾಮನೂರು, ಯಡಿಯೂರಪ್ಪ, ಖಂಡ್ರೆ ಕುಟುಂಬದ ಸಮಾವೇಶ; ಯತ್ನಾಳ್ ಟೀಕೆ

IMG 20231226 121247

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನ ಕೇವಲ ಶಾಮನೂರು, ಯಡಿಯೂರಪ್ಪ, ಖಂಡ್ರೆ ಕುಟುಂಬದ ಸಮಾವೇಶ; ಯತ್ನಾಳ್ ಟೀಕೆ

ಲಿಂಗಸುಗೂರು: ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನ ಕೇವಲ ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಕುಟುಂಬದ ಸಮಾವೇಶವಾಗಿದೆ. ಹೀಗಾಗಿ ಮಹಾಸಭಾದಿಂದ ಒಳಪಂಗಡಗಳು ಏನನ್ನೂ ನಿರೀಕ್ಷಿಸಲು ಸಾಧ್ಯವಾಗುವುದಿಲ್ಲ ಎಂದು‌ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಮಹಾಸಭಾ ಇದುವರೆಗೆ ಒಳಪಂಗಡಗಳಿಗೆ ಮೀಸಲಾತಿ ಬಗ್ಗೆ ಕಾಳಜಿ ವಹಿಸಿಲ್ಲ. ದಾವಣಗೆರೆಯಲ್ಲಿ ನಡೆದೆ ಅಧಿವೇಶನ ರಾಜ್ಯದ ಮೂರು ಕುಟುಂಬಗಳ ಹಿತಾಸಕ್ತಿ ಕಾಪಾಡಲು ನಡೆದ ಕಾರ್ಯಕ್ರವಾಗಿದೆ. ಪಂಚಮಸಾಲಿಗಳಿಗೆ 2 (ಡಿ) ಮೀಸಲಾತಿ ಸಿಗುವಾಗ ಮಹಾಸಭಾ ಮೌನವಹಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಒಡೆಯುವ ಕುತಂತ್ರ ನಡೆಸಿದಾಗಲೂ ಅವರೊಂದಿಗೆ ಇದ್ದವರು ಇವರೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀರಶೈವ ಲಿಂಗಾಯತರು ಒಂದೇ ಎಂಬ ಸಂದೇಶ ನೀಡುವಲ್ಲಿ ವೀರಶೈವ ಮಹಾಸಭಾ ವಿಫಲವಾಗಿದೆ. ಒಳಪಂಗಡಗಳು ಹರಿದು ಹಂಚಿಹೋಗಿವೆ. ಈ ಕುರಿತು ಚಿಂತನೆ ನಡೆಸಿಲ್ಲ. ಸಮಾಜದ ಬಹುತೇಕ ಕಾವಿಧಾರಿಗಳು ತಮ್ಮ ತಮ್ಮ ಮಠ ಅಭಿವೃದ್ಧಿ, ಹೈಟೆಕ್‍ ಜೀವನ ಶೈಲಿ, ವಿದೇಶಿ ಪ್ರವಾಸದಲ್ಲಿ ಮೋಜು, ಮಸ್ತಿ ನಡೆಸುತ್ತಿದ್ದಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top