Connect with us

Dvgsuddi Kannada | online news portal | Kannada news online

ಎರಡ್ಮೂರು ದಿನದಲ್ಲಿ ಕೇರಳಕ್ಕೆ  ಮುಂಗಾರು ಮಳೆ ಪ್ರವೇಶ;  ಮೇ 30ರವರೆಗೆ ರಾಜ್ಯದಲ್ಲಿ ಚದುರಿದ ಮಳೆ ಸಾಧ್ಯತೆ ..!

ಪ್ರಮುಖ ಸುದ್ದಿ

ಎರಡ್ಮೂರು ದಿನದಲ್ಲಿ ಕೇರಳಕ್ಕೆ  ಮುಂಗಾರು ಮಳೆ ಪ್ರವೇಶ;  ಮೇ 30ರವರೆಗೆ ರಾಜ್ಯದಲ್ಲಿ ಚದುರಿದ ಮಳೆ ಸಾಧ್ಯತೆ ..!

ಬೆಂಗಳೂರು: ಇಂದಿನಿಂದ (ಮೇ 27)  ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಮುಂಗಾರು ಕೊಂಚ ವಿಳಂಬವಾಗಲಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ

ಈಗಾಗಲೇ ಅಂಡಮಾನ್ ದ್ವೀಪಗಳನ್ನು ತಲುಪಿರುವ ಮುಂಗಾರು ಮಾರುತಗಳು ಈಗ ಅರಬ್ಬಿ ಸಮುದ್ರದ ಕಡೆ ಚಲಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಮೇ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಮೇ 30ರವರೆಗೆ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top