ಮಧ್ಯಪ್ರದೇಶದಲ್ಲಿ ಕಾಲುವೆಗೆ ಬಸ್ ಉರುಳಿದ ದುರಂತ: ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ  ಕಾಲುವೆಗೆ ಬಸ್‌  ಉರುಳಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದ್ದು, ಇಂದು ಕೂಡ 4 ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಮಂಗಳವಾರ ಬಸ್‌ವೊಂದು ಸೇತುವೆಗೆ ಡಿಕ್ಕಿಯಾಗಿ ಕಾಲುವೆಗೆ ಉರುಳಿ ಬಿದ್ದಿತ್ತು. ಬಸ್‌ನಲ್ಲಿದ್ದವರ ಪೈಕಿ 20 ಮಹಿಳೆಯರು ಸೇರಿ 47 ಪ್ರಯಾಣಿಕರ ಶವಗಳು ನಿನ್ನೆ  ಪತ್ತೆಯಾಗಿದ್ದವು. ಒಟ್ಟು 57 ಮಂದಿ ಪ್ರಯಾಣಿಕರಲ್ಲಿ 51 ಮಂದಿ ಮೃತಪಟ್ಟಿದ್ದಾರೆ.

ನಿನ್ನೆ ಸ್ಥಗಿತಗೊಳಿಸಲಾದ ರಕ್ಷಣಾ ಕಾರ್ಯಾಚರಣೆ ಇಂದು ಬೆಳಿಗ್ಗೆ ಪುನರಾರಂಭಗೊಂಡಿತ್ತು.  ಬನ್ಸಾಗರ್ ಅಣೆಕಟ್ಟು ಯೋಜನೆಯ ಭಾಗವಾಗಿರುವ ಕಾಲುವೆಯಲ್ಲಿ ಎರಡು ಮೃತದೇಹಗಳು ಸಿಕ್ಕಿವೆ’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜುಲತ ಪಟ್ಲೆ ಹೇಳಿದರು.

‘ಈವರೆಗೆ 51 ಶವಗಳು ಪತ್ತೆಯಾಗಿವೆ. ಸಿಧಿ ಮತ್ತು ರೇವಾದ ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇನ್ನೂ 3 ಮಂದಿ ನಾಪತ್ತೆಯಾಗಿರುವ ಶಂಕೆಯಿದೆ’ ಎಂದು ಅವರು ತಿಳಿಸಿದರು.

‘ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಐದು ಜಿಲ್ಲೆಗಳ ಸ್ಥಳೀಯ ಅಧಿಕಾರಿಗಳು ಸೇರಿದಂತೆ ಒಟ್ಟು 600 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ’ ಎಂದು ಅಧಿಕಾರಿಳು  ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *