Connect with us

Dvgsuddi Kannada | online news portal | Kannada news online

ದಾವಣಗೆರೆ ಮೇಯರ್ ಚುನಾವಣೆ: ನೂರಕ್ಕೆ ನೂರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ: ಸಂಸದ ಜಿ.ಎಂ ಸಿದ್ದೇಶ್ವರ್

ದಾವಣಗೆರೆ

ದಾವಣಗೆರೆ ಮೇಯರ್ ಚುನಾವಣೆ: ನೂರಕ್ಕೆ ನೂರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ: ಸಂಸದ ಜಿ.ಎಂ ಸಿದ್ದೇಶ್ವರ್

ಜಗಳೂರು: ಈ ಬಾರಿಯೂ ಕೂಡ ಬಿಜೆಪಿ ಪಕ್ಷ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ. 24 ರಂದು ನಡೆಯುವ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ನೂರಕ್ಕೆ ನೂರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ. 58 ಜನ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾರನ್ನು ಕೂಡ ಅಕ್ರಮವಾಗಿ ಸೇರಿಸಿಲ್ಲ. ಸಚಿವ ಆರ್. ಶಂಕರ್ ಅವರು ಇಲ್ಲಿ ನಿವಾಸದ ವಿಳಾಸ ಕೊಟ್ಟಿರುವುದರಿಂದ ಅವರ ಹೆಸರು ಮತದಾರ ಪಟ್ಟಿಯಲ್ಲಿ ಸೇರಿದೆ. ಎಲ್ಲವೂ ಕಾನೂನು ಪ್ರಕಾರ ನಡೆಲಿದೆ ಎಂದರು.

ಮೇಯರ್ ಯಾರು ಆಗಬೇಕು ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಫೆ. 23 ರಂದು ಶಾಸಕ ರವೀಂದ್ರನಾಥ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷೇತರ ನಾಲ್ವರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರೇ ಇಬ್ಬರು ಸದಸ್ಯರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದರು.

ಮೇಯರ್ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನಕ್ಕೆ ಎಸ್ ಸಿ ಮಹಿಳೆಗೆ ಮೀಸಲಾತಿ ನಿಗದಿಯಾಗಿದೆ. ಇದು ಸರ್ಕಾರದ ಅಧಿಕೃತ ಮೀಸಲಾತಿಯಾಗಿದೆ. ನಮ್ಮಲ್ಲಿ 21 ಜನರೂ ಕೂಡ ಆಕಾಂಕ್ಷಿಯಾಗಿದ್ದಾರೆ. ಕೋರ್ ಕಮಿಟಿ ನಿರ್ಧಾರವೇ ಅಂತಿಮ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top