ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಲು ಪಿ.ಸಾಯಿನಾಥ್ ನಿರ್ಧಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ, ಪ್ರದಾನ ಮಾಡಿದ್ದ ಬಸವಶ್ರೀ ಪ್ರಶಸ್ತಿಯನ್ನು ಪತ್ರಕರ್ತ ಪಿ.ಸಾಯಿನಾಥ್ ಅವರು ಹಿಂದಿರುಗಿಸಲು ತೀರ್ಮಾನಿಸಿದ್ದಾರೆ.

ಪ್ರಕರಣದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿ ಅವರು ಬಂಧಿತರಾದ ಹಿನ್ನೆಲೆ ಪ್ರಶಸ್ತಿ ಹಿಂದಿರುಗುಸಲು ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಸಾಯಿನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುರುಘಾ ಮಠದಿಂದ ಪ್ರತಿವರ್ಷ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. 2017ರಲ್ಲಿ ಸಾಯಿನಾಥ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಪ್ರಶಸ್ತಿಯೊಂದಿಗೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗಿತ್ತು. ಪೋಕ್ಸೋ ಕಾಯ್ದೆಯಡಿ ಶ್ರೀ ಬಂಧಿತರಾಗಿರುವ ಹಿನ್ನೆಲೆ ಅವರಿಂದ ಪಡೆದ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಮುರುಘಾ ಮಠ ನೀಡಿದ್ದ 5 ಲಕ್ಷ ರೂಪಾಯಿ ನಗದು ಕೂಡ ವಾಪಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬಸವಣ್ಣನ ಹೆಸರಿನಲ್ಲಿ 1997ರಿಂದ ಮುರುಘಾ ಮಠ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಅಣ್ಣಾ ಹಜಾರೆ, ಮೇಧಾ ಪಾಟ್ಕರ್, ಸ್ವಾಮಿ ಅಗ್ನಿವೇಶ್, ಕಿರಣ್ ಬೇಡಿ, ಶಬಾನಾ ಆಜ್ಮಿ, ದಲೈಲಾಮಾ, ಬಲ್ಲಾದೀರ್ ಗದ್ದರ್, ಪಿ.ಟಿ ಉಷಾ ಅವರಿಗೆ ಬಸವಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *