ಮೈಸೂರು ದಸರಾಗೆ 6 ದಿನವಷ್ಟೇ ಬಾಕಿ: ಅಧಿಕಾರಿಗಳ ಜತೆ ಸಿಎಂ ಸಭೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು:  ಕೊರೊನಾ ನಡುವೆಯೂ ಮೈಸೂರು ದಸರಾ ಆಚರಣೆ ಮಾಡಲಾಗುತ್ತಿದ್ದು,  ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಆಯುಕ್ತ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಅಕ್ಟೋಬರ್ 17ರಂದು ಬೆಳಗ್ಗೆ 7:45 ರಿಂದ 8:15 ರೊಳಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಕೊರೊನಾ ವಾರಿಯರ್ಸ್ ಗಳ ಆಯ್ಕೆಯನ್ನು ಆಯಾ ಇಲಾಖೆಯ ಮುಖ್ಯಸ್ಥರಿಗೆ ವಹಿಸಲಾಗಿದೆ. ಅರಮನೆಯಂಗಳದಲ್ಲಿ 9 ದಿನಗಳ ಕಾರ್ಯಕ್ರಮ ಇರಲಿದೆ. 9 ದಿನಗಳ ಕಾಲ ರಾಷ್ಟ್ರೀಯ, ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಆದರೆ ಈ ಬಾರಿ ಒಂದು ದಿನಕ್ಕೆ ಒಂದೇ ಕಾರ್ಯಕ್ರಮ ಇರಲಿದೆ.

ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ ಮಾಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *