ರಾಜ್ಯ ಸುದ್ದಿ
ನಬಾರ್ಡ್ ಸಾಲ ಪ್ರಮಾಣ ಶೇ.58ರಷ್ಟು ಕಡಿತ; ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವುದು ಕಷ್ಟ: ಸಹಕಾರ ಸಚಿವ ರಾಜಣ್ಣ

ಬೆಂಗಳೂರು: ನಬಾರ್ಡ್ನಿಂದ ರಾಜ್ಯಕ್ಕೆ ಸಾಲ ನೀಡಿಕೆ ಕಡಿತವಾಗಿದೆ. ಕಳೆದ ಬಾರಿ ರಾಜ್ಯಕ್ಕೆ 5,600 ಕೋಟಿ ರೂ. ಸಾಲ ನೀಡಿದ್ದ ನಬಾರ್ಡ್ (NABARD), ಈ ವರ್ಷ 2,340 ಕೋಟಿ ಸಾಲ ನೀಡಿದೆ. ಸಾಲದ ಪ್ರಮಾಣ ಶೇ.58 ರಷ್ಟು ಕಡಿತವಾಗಿದೆ. ಇದರಿಂದ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡುವುದು ಕಷ್ಟವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಸಹಕಾರ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ 2024-25ನೇ ಸಾಲಿಗೆ 35 ಲಕ್ಷ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. 2023-24ನೇ ಸಾಲಿಗೆ ಅಲ್ಪಾವಧಿ ಕೃಷಿ ಪತ್ತಿನ ಸಂಸ್ಥೆಗಳ ಮೂಲಕ 22,902 ಕೋಟಿ ಅಲ್ಪಾವಧಿ ಸಾಲ ವಿತರಿಸಲಾಗಿತ್ತು. ರಾಜ್ಯ ಅಪೆಕ್ಸ್ ಬ್ಯಾಂಕ್ 2024-25ನೇ ಸಾಲಿಗೆ 9162 ಕೋಟಿ ರೂ.ಗಳ ರಿಯಾಯಿತಿ ಬಡ್ಡಿ ದರದ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಮಂಜೂರು ಮಾಡಲು ಕೋರಲಾಗಿದೆ. ಆದರೆ, ನಬಾರ್ಡ್ ಪತ್ರದಲ್ಲಿ ಕರ್ನಾಟಕಕ್ಕೆ 2,340 ಕೋಟಿ ರೂ ಮಂಜೂರು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಬಾರ್ಡ್ ನಮಗೆ 4.5% ಬಡ್ಡಿ ದರದರಲ್ಲಿ ಹಣ ಕೊಡ್ತಿತ್ತು. ನಾವು ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡುತ್ತಿದ್ದೆವು. 1200 ಕೋಟಿಯಷ್ಟು ಸರ್ಕಾರ ತುಂಬುತಿತ್ತು. ನಬಾರ್ಡ್ನಿಂದ 5600 ಕೋಟಿ ಬರುತಿತ್ತು. ಅದರ ಹಿಂದಿನ ವರ್ಷ 5400 ಕೋಟಿ ನೀಡಿದ್ದರು. ಈ ಬಾರಿ ನಾವು ನಬಾರ್ಡ್ಗೆ ಮನವಿ ಸಲ್ಲಿಸಿದ್ದು, 5600 ಕೋಟಿ ರೂ. ಆದರೆ, ಈ ಬಾರಿ 2,340 ಕೋಟಿ ರೂ. ಬಂದಿದೆ ಎಂದರು.
ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ;ಈ ಹಿನ್ನೆಲೆಯಲ್ಲಿ ರೈತರಿಗೆ ಇನ್ಮುಂದೆ ಸಾಲ ನೀಡುವುದು ಕಷ್ಟ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಕೇಂದ್ರದ ಹಣಕಾಸು ಸಚಿವರಿಗೆ ಪತ್ರ ಬರೆಯಲಾಗಿದೆ. ಸಂಸದರಿಗೂ ಮನವಿ ಮಾಡಿದ್ದೇವೆ. ಸಿಎಂ ಕೂಡ ಪತ್ರ ಬರೆದುದ್ದು ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಹೇಳಿದರು.
ಅನ್ಯಾಯವಾದರೂ ಬಾಯಿ ಬಿಡದ ಸಚಿವರು; ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ರೈತರಿಗೆ ಶಕ್ತಿ ತುಂಬಲು ಸಹಕಾರ ಸಂಘಗಳಿವೆ. ಇದಕ್ಕೆ ಬಲ ತುಂಬಲು ನಬಾರ್ಡ್ ಇದೆ. ಈ ಬಾರಿ ಕೇವಲ 2340 ಕೋಟಿ ಬಂದಿದೆ. ರಾಜ್ಯದಲ್ಲಿ ಮೂವರು ಕೇಂದ್ರ ಸಚಿವರಿದ್ದಾರೆ. ರೈತರಪರ ಎನ್ನುವ ಕುಮಾರಸ್ವಾಮಿ ಯಾಕೆ ಬಾಯಿ ಬಿಡುತ್ತಿಲ್ಲ ಎಂದರು.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ದಾವಣಗೆರೆ: ಲಿಂಗಾಯತ, ಒಕ್ಕಲಿಗ ಸಮುದಾಯ ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ,...
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಗೂಲಿ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.ಆದರೆ, ಅಧಿಕಾರಿಗಳು ಕಾರ್ಮಿಕರಿಂದ 5 ಲಕ್ಷ...
ತುಮಕೂರು; ಇಂದು (ಡಿ.2) ಬೆಳ್ಳಂಬೆಳಗ್ಗೆ ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೀಕರ ಬಸ್ ಅಪಘಾತ ನಡೆದಿದ್ದು, ಡೆಲ್ಲಿ ಮೂಲದ ಪತ್ರಕರ್ತೆ ಸೇರಿ...
ನವದೆಹಲಿ: ರಾಜ್ಯದ 5,949 ಗ್ರಾಮ ಪಂಚಾಯತ್ಗಳಿಗೆ 15ನೇ ಹಣಕಾಸು ಆಯೋಗ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಮೊದಲ ಕಂತಿನಲ್ಲಿ 448.29...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಅಧಿವೇಶನ...