Connect with us

Dvgsuddi Kannada | online news portal | Kannada news online

ಬಿಜೆಪಿ ರಾಷ್ಡ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ರಾಷ್ಟ್ರ ಸುದ್ದಿ

ಬಿಜೆಪಿ ರಾಷ್ಡ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ : ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ತಂಡದೊಂದಿಗೆ ತೆರಳುತ್ತಿದ್ದ ಮಾಧ್ಯಮದವರ ಮೇಲೂ ಹಾನಿಯಾಗಿದೆ, ಡೈಮಂಡ್‌ ಹಾರ್ಬರ್‌ಗೆ ತೆರಳುತ್ತಿದ್ದ ನಮ್ಮ ವಾಹನಗಳನ್ನು ದಾರಿಯಲ್ಲಿ ಅಡ್ಡಗಟ್ಟಿದ ಟಿಎಂಸಿ ಬೆಂಬಲಿಗರು, ನಡ್ಡಾ ಅವರ ವಾಹನ ಸೇರಿದಂತೆ, ತಂಡದಲ್ಲಿದ್ದ ಇತರೆ ನಾಯಕರ ವಾಹನಗಳ ಮೇಲೆ ಕಲ್ಲು ತೂರಿದರು. ಈ ಮೂಲಕ ಟಿಎಂಸಿ ಅವರ ನಿಜ ಬಣ್ಣ ಬಯಲಾಗಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ದಿಲೀಪ್ ಘೋಷ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಡ್ಡಾ ಅವರು, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಗೂಂಡಾರಾಜ್ಯದ ಆಡಳಿತ ನಡೆಯುತ್ತಿದೆ ಎಂದಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement

ದಾವಣಗೆರೆ

Advertisement
To Top