ಚಂದ್ರಯಾನ-3 ಯಶಸ್ವಿ; ಭಾರತಕ್ಕೆ ಐತಿಹಾಸಿಕ ಕ್ಷಣ; ಇಸ್ರೋ ಮಹತ್ವದ ಸಾಧನೆ…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಇಂದು (ಆ.23) ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುದೆ. ಇದು ಭಾರತಕ್ಕೆ ಐತಿಹಾಸಿಕ ಕ್ಷಣವಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಹತ್ವದ ಸಾಧನೆ ಮಾಡಿದಂತಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ಇಸ್ರೋ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು.

ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ-3 ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸ್ಥಳ ಎಂದು ನಿಗದಿಪಡಿಸಿದ್ದರು

ವಿಕ್ರಮ್ ಲ್ಯಾಂಡರ್‌‌ ಮೊದಲ ಬಾರಿ ಚಂದ್ರನ ಪ್ರದೇಶಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ. ವೇಗವನ್ನು ಕಡಿಮೆ ಮಾಡಲು ನಾಲ್ಕು ಥ್ರಸ್ಟರ್ ಎಂಜಿನ್‌ಗಳ ರೆಟ್ರೊ ಫೈರಿಂಗ್‌ನೊಂದಿಗೆ ವಿಕ್ರಮ್ ಲ್ಯಾಂಡರ್‌ನ ಚಾಲಿತ ಬ್ರೇಕಿಂಗ್ ಪ್ರಾರಂಭವಾಯಿತು. ನಂತರ ಕೊನೆಯ 17 ನಿಮಿಷಗಳು ಕಠಿಣ ಸವಾಲಾಗಿತ್ತು. ಭಾರತೀಯ ವಿಜ್ಞಾನಿಗಳ ಈ ಸಾಧನೆಗೆ ದೇಶ ಹಾಗೂ ವಿಶ್ವದಾದ್ಯಂತ ಮೆಚ್ವುಗೆ ವ್ಯಕ್ತವಾಗಿದೆ.ಭಾರತಕ್ಕೂ ಮುನ್ನ ರಷ್ಯಾ, ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್ ಯಶಸ್ವಿಯಾಗಿ ಚಂದ್ರನ ಮೇಲೆ ರೋವರ್ ಇಳಿಸಿವೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *