ಭೀಕರ ರಸ್ತೆ ಅಪಘಾತ; 9 ಮಂದಿ ಸ್ಥಳದಲ್ಲಿಯೇ ಸಾವು; 27 ಮಂದಿಗೆ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬಾರಬಂಕಿ: ಬಸ್ ಮತ್ತು ಟ್ರಕ್​​ ಡಿಕ್ಕಿಯಾದ ಹಿನ್ನೆಲೆ ಸ್ಥಳದಲ್ಲಿಯೇ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ.  ದೇವಾ ಪೊಲೀಸ್​ ಠಾಣೆ ಸಮೀಪದ ಕಿಸಾನ್​ ಪಥ್​​ ಬಬುರಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಮಾಹಿತಿ ಪಡೆಯುತ್ತಿದ್ಧಾರೆ. ಗಂಭೀರವಾಗಿ ಗಾಯಗೊಂಡರವನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ. ದೆಹಲಿಯಿಂದ ಉತ್ತರ ಪ್ರದೇಶದ ಬಹ್ರಿಚ್​​ಗೆ ಪ್ರಯಾಣಿಸುತ್ತಿದ್ದ ಬಸ್  ಮರಳು ಲಾರಿಗೆ ಡಿಕ್ಕಿ ಹೊಡೆದಿದ್ದರಿಂ ಈ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೂ ಗಾಯಾಳುಗಳಿಗೆ ಚಿಕಿತ್ಸೆಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *